<p>ರಾಜ್ ಬಿ ಶೆಟ್ಟಿ ನಾಯಕ ನಟನಾಗಿರುವ ‘ರಕ್ಕಸಪುರದೋಳ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರವಿ ಸಾರಂಗ ನಿರ್ದೇಶನದ ಚೊಚ್ಚಲ ಸಿನಿಮಾದಲ್ಲಿ ರಾಜ್ ಶೆಟ್ಟಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<p>‘ಕೊಳ್ಳೇಗಾಲವನ್ನು ಆಧರಿಸಿದ ಕ್ರೈಮ್ ಥ್ರಿಲ್ಲರ್ ಕಥೆ ಇದು. ಜತೆಗೆ ಮನುಷ್ಯನ ಒಳಗಿನ ದೈತ್ಯನ ಬಗೆಗಿನ ಕಥೆ ಕೂಡ. ಪ್ರತಿಯೊಬ್ಬ ವ್ಯಕ್ತಿಗೂ ಎರಡು ಮುಖಗಳಿರುತ್ತವೆ. ಒಂದು ಒಳ್ಳೆಯದು ಮತ್ತು ಇನ್ನೊಂದು ಕೆಟ್ಟದ್ದು. ಆ ಕತ್ತಲೆಯೇ ರಕ್ಕಸ. ಮುಖ್ಯ ಪಾತ್ರವು ತನ್ನ ಆಂತರಿಕ ಹೋರಾಟಗಳನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ಈ ಚಿತ್ರವು ಹೇಳುತ್ತದೆ’ ಎನ್ನುತ್ತಾರೆ ನಿರ್ದೇಶಕ.</p>.<p>‘ಗರುಡ ಗಮನ’, ‘ಟೋಬಿ’ ಚಿತ್ರಗಳ ಬಳಿಕ ರಾಜ್ ಮತ್ತೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ದುಷ್ಟರನ್ನು ಸಂಹಾರ ಮಾಡುವ ಪಾತ್ರ ಇವರದ್ದು ಎಂದು ಟೀಸರ್ನಿಂದ ಗೊತ್ತಾಗುತ್ತದೆ. </p>.<p>2026 ಫೆಬ್ರುವರಿ 6ಕ್ಕೆ ಚಿತ್ರ ತೆರೆಗೆ ಬರಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ. ಸ್ವತಿಷ್ಠ ಕೃಷ್ಣನ್, ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ ಬಿ ಶೆಟ್ಟಿ ನಾಯಕ ನಟನಾಗಿರುವ ‘ರಕ್ಕಸಪುರದೋಳ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರವಿ ಸಾರಂಗ ನಿರ್ದೇಶನದ ಚೊಚ್ಚಲ ಸಿನಿಮಾದಲ್ಲಿ ರಾಜ್ ಶೆಟ್ಟಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<p>‘ಕೊಳ್ಳೇಗಾಲವನ್ನು ಆಧರಿಸಿದ ಕ್ರೈಮ್ ಥ್ರಿಲ್ಲರ್ ಕಥೆ ಇದು. ಜತೆಗೆ ಮನುಷ್ಯನ ಒಳಗಿನ ದೈತ್ಯನ ಬಗೆಗಿನ ಕಥೆ ಕೂಡ. ಪ್ರತಿಯೊಬ್ಬ ವ್ಯಕ್ತಿಗೂ ಎರಡು ಮುಖಗಳಿರುತ್ತವೆ. ಒಂದು ಒಳ್ಳೆಯದು ಮತ್ತು ಇನ್ನೊಂದು ಕೆಟ್ಟದ್ದು. ಆ ಕತ್ತಲೆಯೇ ರಕ್ಕಸ. ಮುಖ್ಯ ಪಾತ್ರವು ತನ್ನ ಆಂತರಿಕ ಹೋರಾಟಗಳನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ಈ ಚಿತ್ರವು ಹೇಳುತ್ತದೆ’ ಎನ್ನುತ್ತಾರೆ ನಿರ್ದೇಶಕ.</p>.<p>‘ಗರುಡ ಗಮನ’, ‘ಟೋಬಿ’ ಚಿತ್ರಗಳ ಬಳಿಕ ರಾಜ್ ಮತ್ತೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ದುಷ್ಟರನ್ನು ಸಂಹಾರ ಮಾಡುವ ಪಾತ್ರ ಇವರದ್ದು ಎಂದು ಟೀಸರ್ನಿಂದ ಗೊತ್ತಾಗುತ್ತದೆ. </p>.<p>2026 ಫೆಬ್ರುವರಿ 6ಕ್ಕೆ ಚಿತ್ರ ತೆರೆಗೆ ಬರಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ. ಸ್ವತಿಷ್ಠ ಕೃಷ್ಣನ್, ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>