<p>ದಿವಂಗತ ಚಿರಂಜೀವಿ ಸರ್ಜಾ ಅಭಿನಯದ ‘ರಾಜ ಮಾರ್ತಾಂಡ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇಲ್ಲಿ ಚಿರು ಪಾತ್ರಕ್ಕೆ ಧ್ವನಿಯಾದವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ಯುಗಾದಿಯಂದು ಪೋಸ್ಟರ್ ಬಿಡುಗಡೆಯಾಗಿದೆ. ಬಿಡುಗಡೆ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ.</p>.<p>ಡಿ.ಸಿ.ಪಿ ಪ್ರಕಾಶ್ ಗೌಡ ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲಾ ಅವರು ಈ ಸಂದರ್ಭದಲ್ಲಿ ಇದ್ದರು.</p>.<p>ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ಣಗೊಂಡಿತ್ತು. ‘ರಾಜಮಾರ್ತಾಂಡ’ ಶೀರ್ಷಿಕೆ ಹಾಗೂ ಚಿರು ಕಾರಣಕ್ಕೆ ಕುತೂಹಲ ಸೃಷ್ಟಿಸಿತ್ತು.</p>.<p>ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಪ್ರಣವ್ ಗೌಡ ಎನ್., ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.</p>.<p>ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು.ಡಿ.ವಿ. ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.</p>.<p>ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಿವಂಗತ ಚಿರಂಜೀವಿ ಸರ್ಜಾ ಅಭಿನಯದ ‘ರಾಜ ಮಾರ್ತಾಂಡ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇಲ್ಲಿ ಚಿರು ಪಾತ್ರಕ್ಕೆ ಧ್ವನಿಯಾದವರು ಚಾಲೆಂಜಿಂಗ್ ಸ್ಟಾರ್ ದರ್ಶನ್. ಯುಗಾದಿಯಂದು ಪೋಸ್ಟರ್ ಬಿಡುಗಡೆಯಾಗಿದೆ. ಬಿಡುಗಡೆ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ.</p>.<p>ಡಿ.ಸಿ.ಪಿ ಪ್ರಕಾಶ್ ಗೌಡ ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲಾ ಅವರು ಈ ಸಂದರ್ಭದಲ್ಲಿ ಇದ್ದರು.</p>.<p>ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ಣಗೊಂಡಿತ್ತು. ‘ರಾಜಮಾರ್ತಾಂಡ’ ಶೀರ್ಷಿಕೆ ಹಾಗೂ ಚಿರು ಕಾರಣಕ್ಕೆ ಕುತೂಹಲ ಸೃಷ್ಟಿಸಿತ್ತು.</p>.<p>ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಪ್ರಣವ್ ಗೌಡ ಎನ್., ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.</p>.<p>ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು.ಡಿ.ವಿ. ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.</p>.<p>ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>