ರಂಗಾಯಣ ರಘು, ಸಂಪತ್ ರಾಜ್, ಕರಾವಳಿಯ ಕೆವಿಆರ್ ಮತ್ತು ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದಾರೆ. ಚಿತ್ರದ ಪ್ರಮುಖ ದೃಶ್ಯಕ್ಕೆ ಅಂತಿಮ ಹಂತದ ಚಿತ್ರೀಕರಣ ಕಳೆದ ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಇದಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ವಿಧಿ ಅವರನ್ನು ಹಠಾತ್ ಸೆಳೆದೊಯ್ದಿತ್ತು. ಈ ಘಟನೆಯಿಂದ ಚಿತ್ರತಂಡ ಶಾಕ್ ಗೆ ಒಳಗಾಗಿತ್ತು. ಇದೀಗ ಇನ್ನೊಬ್ಬರು ಸ್ಟಾರ್ ನಟರು ಆ ದೃಶ್ಯದಲ್ಲಿ ನಟಿಸಿದ್ದಾರೆ. ಆ ನಟ ಯಾರು ಎಂಬ ಗುಟ್ಟನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.