ನಟ ದರ್ಶನ್ ‘ರಾಜವೀರ ಮದಕರಿನಾಯಕ’ ಚಿತ್ರದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತು. ಇದಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವುದು ಎಸ್.ವಿ. ರಾಜೇಂದ್ರಸಿಂಗ್ ಬಾಬು. ಕಳೆದ ವರ್ಷದ ಡಿಸೆಂಬರ್ನಲ್ಲಿಯೇ ಇದರ ಮುಹೂರ್ತ ನೆರವೇರಿತ್ತು. ಈಗ ಕೇರಳದ ತ್ರಿಶೂರ್ ಜಿಲ್ಲೆಯ ಚಾಲುಕುಡಿ ಜಲಪಾತ ಪ್ರದೇಶದಲ್ಲಿ ಸಿನಿಮಾದ ಮೊದಲ ಹಂತದ ಶೂಟಿಂಗ್ ನಡೆಸಲು ಚಿತ್ರತಂಡ ಸಿದ್ಧತೆ ನಡೆಸಿದೆ. ಇಲ್ಲಿ ಮದಕರಿನಾಯಕನ ಗುರುಕುಲದ ಸೆಟ್ ಹಾಕಲಾಗುತ್ತದೆಯಂತೆ.