ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ನಿರ್ಧಾರ: ರಾಜೇಂದ್ರ ಸಿಂಗ್ ಬಾಬು ಸ್ವಾಗತ

Last Updated 18 ಮಾರ್ಚ್ 2021, 13:17 IST
ಅಕ್ಷರ ಗಾತ್ರ

ಬೆಂಗಳೂರು: ‘ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರ’ ಎಂದು ನಿರ್ಮಾಪಕ, ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ.

‘ಕಳೆದ 40 ವರ್ಷದಿಂದ ಹೆಸರಘಟ್ಟ, ರಾಮನಗರ ಅಲ್ಲಿ, ಇಲ್ಲಿ ಚಿತ್ರನಗರಿ ತಲೆಯೆತ್ತಲಿದೆ ಎಂಬ ಸುದ್ದಿಗಳನ್ನಷ್ಟೇ ಕೇಳುತ್ತಾ ಬಂದಿದ್ದೆವು. ಇದೀಗ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸೂಚಿಸಿರುವುದು ಖುಷಿಯಾಗಿದೆ. ಇದರ ಅನುಷ್ಠಾನಕ್ಕೆ ಕಾರಣೀಕರ್ತರಾದವರಿಗೆ ನನ್ನ ಧನ್ಯವಾದ. ಮೈಸೂರಿಗೆ 85 ವರ್ಷಗಳ ಸಿನಿಮಾ ಇತಿಹಾಸವಿದೆ. ಇಂಥಹ ಇತಿಹಾಸ ಇರುವ ನಗರಕ್ಕೆ ಚಿತ್ರನಗರಿ ಎನ್ನುವ ಮತ್ತೊಂದು ಕಿರೀಟ ಮುಡಿಗೇರಿದ್ದು, ಚಿತ್ರೋದ್ಯಮದ ಪ್ರಗತಿಗೆ ಇದು ದಾರಿಯಾಗಲಿದೆ’ ಎಂದಿದ್ದಾರೆ.

ಮೈಸೂರಿನ ಪ್ರವಾಸೋದ್ಯಮಕ್ಕೂ ಇದರಿಂದ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಎಂಜಿಆರ್, ರಾಜ್ ಕಪೂರ್, ಶಾಂತಾ ರಾಮ್ ಎಲ್ಲರೂ ಮೈಸೂರಿನಲ್ಲಿಯೇ ಇರುತ್ತಿದ್ದರು. ಮೈಸೂರಿನ ಕೇವಲ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 257 ಲೋಕೇಷನ್‌ಗಳು ಇವೆ. 16 ಅರಮನೆಗಳು, 5 ನದಿಗಳಿವೆ.

ಹೀಗಾಗಿಯೇ ವಿಷ್ಣುವರ್ಧನ್ ಮತ್ತು ರಜನಿಕಾಂತ್ ಅವರಿಗೂ ಮೈಸೂರು ಅಂದ್ರೆ ಪಂಚಪ್ರಾಣ. ಇದೀಗ ಸರ್ಕಾರ ಇಂತಹ ಐತಿಹ್ಯವಿರುವ ನಗರಕ್ಕೆ ಚಿತ್ರನಗರಿ ನೀಡುತ್ತಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT