<p>ಚೆನ್ನೈ (ಪಿಟಿಐ): ‘ಅಭಿಮಾನಿಗಳಿಗೆ ತಮ್ಮ ಸುರಕ್ಷತೆಯೇ ಆದ್ಯತೆಯಾಗಿರಬೇಕು. ಅಭಿಮಾನದಿಂದಾಗುವ ತೊಂದರೆಗಳನ್ನು ತಾವೇ ಎದುರಿಸಬೇಕು ಎಂಬುದನ್ನು ಮರೆಯಬಾರದು’ ಎಂದು ನಟ ರಜನಿಕಾಂತ್ ಅವರು ಸಲಹೆ ನೀಡಿದರು.</p>.<p>ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯುವಜನರು ಶಿಕ್ಷಣ ಮತ್ತು ದೈಹಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಚುನಾವಣಾ ರ್ಯಾಲಿ ವೇಳೆ ನಟ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ನೂಕುನುಗ್ಗಲು ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಭಿಮಾನಿಗಳು ಎಚ್ಚರದಿಂದ ಇರಬೇಕು. ವಿದ್ಯಾರ್ಥಿ ಜೀವನವೂ ಮಹತ್ವದಾಗಿದ್ದು, ಆ ಸಮಯ ವ್ಯರ್ಥ ಮಾಡಿಕೊಂಡರೆ ಜೀವನ ಪೂರ್ತಿ ಕಷ್ಟಪಡಬೇಕಾಗುತ್ತದೆ. ನಿಮ್ಮ ಸಂಪೂರ್ಣ ಆಲೋಚನೆ ಮತ್ತು ಗಮನ ಶಿಕ್ಷಣದ ಮೇಲೆ ಇರಬೇಕು’ ಎಂದು ಹೇಳಿದರು.</p>.<p>‘ಮಾದಕ ವಸ್ತುಗಳ ದಾಸರಾಗಬೇಡಿ. ಇದು ನಿಮ್ಮ ಮತ್ತು ನಿಮ್ಮ ಕುಟುಂಬವನ್ನು ನರಕಕ್ಕೆ ತಳ್ಳುತ್ತದೆ. ಇಂತಹ ವಿಷಯಗಳಿಗೆ ಪ್ರಚೋದಿಸುವ ಸ್ನೇಹಿತರಿದ್ದರೆ, ಅವರಿಂದ ದೂರ ಇರಿ’ ಎಂದು ಸಲಹೆ ನೀಡಿದರು.</p>.<p>ಮುಂದಿನ ಚಿತ್ರದ ಕುರಿತು ಮಾತನಾಡಿದ ಅವರು, ಇನ್ನೂ ಶೇ 20ರಷ್ಟು ಚಿತ್ರೀಕರಣ ಬಾಕಿ ಉಳಿದಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-51-1901967198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ (ಪಿಟಿಐ): ‘ಅಭಿಮಾನಿಗಳಿಗೆ ತಮ್ಮ ಸುರಕ್ಷತೆಯೇ ಆದ್ಯತೆಯಾಗಿರಬೇಕು. ಅಭಿಮಾನದಿಂದಾಗುವ ತೊಂದರೆಗಳನ್ನು ತಾವೇ ಎದುರಿಸಬೇಕು ಎಂಬುದನ್ನು ಮರೆಯಬಾರದು’ ಎಂದು ನಟ ರಜನಿಕಾಂತ್ ಅವರು ಸಲಹೆ ನೀಡಿದರು.</p>.<p>ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯುವಜನರು ಶಿಕ್ಷಣ ಮತ್ತು ದೈಹಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಚುನಾವಣಾ ರ್ಯಾಲಿ ವೇಳೆ ನಟ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ನೂಕುನುಗ್ಗಲು ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಭಿಮಾನಿಗಳು ಎಚ್ಚರದಿಂದ ಇರಬೇಕು. ವಿದ್ಯಾರ್ಥಿ ಜೀವನವೂ ಮಹತ್ವದಾಗಿದ್ದು, ಆ ಸಮಯ ವ್ಯರ್ಥ ಮಾಡಿಕೊಂಡರೆ ಜೀವನ ಪೂರ್ತಿ ಕಷ್ಟಪಡಬೇಕಾಗುತ್ತದೆ. ನಿಮ್ಮ ಸಂಪೂರ್ಣ ಆಲೋಚನೆ ಮತ್ತು ಗಮನ ಶಿಕ್ಷಣದ ಮೇಲೆ ಇರಬೇಕು’ ಎಂದು ಹೇಳಿದರು.</p>.<p>‘ಮಾದಕ ವಸ್ತುಗಳ ದಾಸರಾಗಬೇಡಿ. ಇದು ನಿಮ್ಮ ಮತ್ತು ನಿಮ್ಮ ಕುಟುಂಬವನ್ನು ನರಕಕ್ಕೆ ತಳ್ಳುತ್ತದೆ. ಇಂತಹ ವಿಷಯಗಳಿಗೆ ಪ್ರಚೋದಿಸುವ ಸ್ನೇಹಿತರಿದ್ದರೆ, ಅವರಿಂದ ದೂರ ಇರಿ’ ಎಂದು ಸಲಹೆ ನೀಡಿದರು.</p>.<p>ಮುಂದಿನ ಚಿತ್ರದ ಕುರಿತು ಮಾತನಾಡಿದ ಅವರು, ಇನ್ನೂ ಶೇ 20ರಷ್ಟು ಚಿತ್ರೀಕರಣ ಬಾಕಿ ಉಳಿದಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-51-1901967198</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>