ತಮಿಳುನಾಡು ಸರ್ಕಾರ ಇನ್ನೂ ಸಿನಿಮಾ ಶೂಟಿಂಗ್ಗೆ ಅನುಮತಿ ನೀಡಿಲ್ಲ. ಅನುಮತಿ ಸಿಕ್ಕಿದ ತಕ್ಷಣ ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ಆರಂಭಿಸುವ ಇರಾದೆ ಚಿತ್ರತಂಡದ್ದು. ಸಿರುಥೈ ಶಿವ ನಿರ್ದೇಶನದ ಈ ಚಿತ್ರಕ್ಕೆ ಸನ್ ಪಿಕ್ಚರ್ಸ್ ಬಂಡವಾಳ ಹೂಡಿದೆ. ಡಿ. ಇಮಾನ್ ಸಂಗೀತ ಸಂಯೋಜಿಸಿದ್ದಾರೆ. ರಜನಿಗೆ ನಯನತಾರಾ ಜೋಡಿಯಾಗಿದ್ದಾರೆ. ‘ಮಹಾನಟಿ’ ಖ್ಯಾತಿಯ ಕೀರ್ತಿ ಸುರೇಶ್ ಅವರು ‘ತಲೈವ’ನ ಪುತ್ರಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಖುಷ್ಬೂ, ಮೀನಾ, ಪ್ರಕಾಶ್ ರಾಜ್ ಸೂರಿ ತಾರಾಗಣದಲ್ಲಿದ್ದಾರೆ.