ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ರಜನಿ,  ಅಭಿಮಾನಿಗಳು ನಿರಾಳ

Last Updated 2 ನವೆಂಬರ್ 2021, 11:10 IST
ಅಕ್ಷರ ಗಾತ್ರ

ಚೆನ್ನೈ: ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ನಡೆಸಲಾದ ಶಸ್ತ್ರಚಿಕಿತ್ಸೆಯಿಂದ (carotid artery revascularisation) ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡಿದ್ದು ಸೋಮವಾರ ಮನೆಗೆ ಮರಳಿದ್ದಾರೆ.

ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವಅವರು ‘ನಾನು ಮನೆಗೆ ಮರಳಿದ್ದೇನೆ’ ಎಂದಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾಗುವ ಮುನ್ನ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ರಜನಿಕಾಂತ್‌ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ರಜನಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅಭಿಮಾನಿಗಳು ಆತಂಕಗೊಂಡಿದ್ದರು. ನಿನ್ನೆ ರಜನಿ ಮನೆಗೆ ಮರಳಿರುವುದರಿಂದ ಅಭಿಮಾನಿಗಳು ನಿರಾಳರಾಗಿದ್ದಾರೆ.

ಇಲ್ಲಿನ ಕಾವೇರಿ ಆಸ್ಪತ್ರೆಯಲ್ಲಿ ರಜನಿಕಾಂತ್‌ (70) ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಅಕ್ಟೋಬರ್‌ 28ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು.

ಅಕ್ಟೋಬರ್‌ 25ರಂದು ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್‌ ಅವರಿಗೆ 51ನೇ 'ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ' ಪ್ರದಾನ ಮಾಡಲಾಗಿತ್ತು.

ರಜನಿಕಾಂತ್ ಅಭಿನಯದ 'ಅಣ್ಣಾತ್ತೆ' ಸಿನಿಮಾ ನವೆಂಬರ್ 4 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT