<p>ಸೂಪರ್ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರ ಬಹುನಿರೀಕ್ಷಿತ ‘ತಲೈವರ್ 173’ ಚಿತ್ರದ ನಿರ್ದೇಶಕರು ಮತ್ತೆ ಬದಲಾಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.</p><p>‘ತಲೈವರ್ 173’ ಚಿತ್ರವು ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕೆ ಸುಂದರ್ ಸಿ. ಅವರು ನಿರ್ದೇಶಕರಾಗಿ ಆಯ್ಕೆ ಆಗಿದ್ದರು. ಕಾರಣಾಂತರಗಳಿಂದ ಅವರು ಈ ಚಿತ್ರದಿಂದ ಹೊರ ಹೋಗಿದ್ದರು. </p>.ಆಟೊ ಚಾಲಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ₹25 ಲಕ್ಷ ನೀಡಿದ ನಟ ಧ್ರುವ ಸರ್ಜಾ.<p>ಬಳಿಕ, ‘ಡಾನ್’ ಚಿತ್ರದ ಸಿಬಿ ಚಕ್ರವರ್ತಿ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಈಗ ಅವರು ಕೂಡ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿಲ್ಲ. ಈಗ, ‘ಡ್ರ್ಯಾಗನ್’, ‘ಓ ಮೈ ಕಡವು’ ಖ್ಯಾತಿಯ ಅಶ್ವಥ್ ಮಾರಿಮುತ್ತು ಅವರು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂದು ವರದಿಯಾಗಿದೆ.</p><p>ಸದ್ಯ, ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಮುಗಿಸಿದ ನಂತರ ಈ ಚಿತ್ರದ ಕೆಲಸ ಆರಂಭವಾಗಲಿದೆ. ನಿರೀಕ್ಷೆಯಂತೆ ಈ ಚಿತ್ರದ ಕೆಲಸ ಮುಗಿದರೆ 2027ರ ಸಂಕ್ರಾಂತಿ ಹಬ್ಬದಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೂಪರ್ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರ ಬಹುನಿರೀಕ್ಷಿತ ‘ತಲೈವರ್ 173’ ಚಿತ್ರದ ನಿರ್ದೇಶಕರು ಮತ್ತೆ ಬದಲಾಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.</p><p>‘ತಲೈವರ್ 173’ ಚಿತ್ರವು ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕೆ ಸುಂದರ್ ಸಿ. ಅವರು ನಿರ್ದೇಶಕರಾಗಿ ಆಯ್ಕೆ ಆಗಿದ್ದರು. ಕಾರಣಾಂತರಗಳಿಂದ ಅವರು ಈ ಚಿತ್ರದಿಂದ ಹೊರ ಹೋಗಿದ್ದರು. </p>.ಆಟೊ ಚಾಲಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ₹25 ಲಕ್ಷ ನೀಡಿದ ನಟ ಧ್ರುವ ಸರ್ಜಾ.<p>ಬಳಿಕ, ‘ಡಾನ್’ ಚಿತ್ರದ ಸಿಬಿ ಚಕ್ರವರ್ತಿ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಈಗ ಅವರು ಕೂಡ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿಲ್ಲ. ಈಗ, ‘ಡ್ರ್ಯಾಗನ್’, ‘ಓ ಮೈ ಕಡವು’ ಖ್ಯಾತಿಯ ಅಶ್ವಥ್ ಮಾರಿಮುತ್ತು ಅವರು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂದು ವರದಿಯಾಗಿದೆ.</p><p>ಸದ್ಯ, ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಮುಗಿಸಿದ ನಂತರ ಈ ಚಿತ್ರದ ಕೆಲಸ ಆರಂಭವಾಗಲಿದೆ. ನಿರೀಕ್ಷೆಯಂತೆ ಈ ಚಿತ್ರದ ಕೆಲಸ ಮುಗಿದರೆ 2027ರ ಸಂಕ್ರಾಂತಿ ಹಬ್ಬದಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>