ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಜನಿಕಾಂತ್ ನಮಗೆ ದೇವರು: ತಲೈವಾಗಾಗಿ ದೇವಸ್ಥಾನ ಕಟ್ಟಿದ್ದ ಅಭಿಮಾನಿ

Published 2 ನವೆಂಬರ್ 2023, 2:21 IST
Last Updated 2 ನವೆಂಬರ್ 2023, 2:21 IST
ಅಕ್ಷರ ಗಾತ್ರ

ಚೆನ್ನೈ(ತಮಿಳುನಾಡು): ಅಪಾರ ಅಭಿಮಾನಿಗಳನ್ನು ಹೊಂದಿರುವ ಸೂಪರ್‌ಸ್ಟಾರ್‌ ರಜನಿಕಾಂತ್ ಅವರಿಗೆ ಅಭಿಮಾನಿಯೊಬ್ಬರಿಂದ ವಿಶೇಷ ಉಡುಗೊರೆ ಸಿಕ್ಕಿದೆ.

ಕಾರ್ತಿಕ್‌ ಎಂಬ ಅಭಿಮಾನಿ ತಮಿಳುನಾಡಿನ ಮಧುರೈನಲ್ಲಿರುವ ತಮ್ಮ ಮನೆಯ ಆವರಣದಲ್ಲಿ ತಲೈವಾಗೆ ದೇವಾಲಯವನ್ನು ನಿರ್ಮಿಸಿದ್ದಾರೆ. ದೇವಸ್ಥಾನದಲ್ಲಿ 250 ಕೆ.ಜಿ ತೂಕದ ರಜನಿಕಾಂತ್ ಅವರ ವಿಗ್ರಹವನ್ನು ನಿರ್ಮಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಭಿಮಾನಿ ಕಾರ್ತಿಕ್‌, 'ನಾನು ರಜನಿಕಾಂತ್ ಬಿಟ್ಟು ಬೇರೆ ಯಾವುದೇ ನಟರ ಸಿನಿಮಾ ನೋಡುವುದಿಲ್ಲ. ನಮಗೆ ಅವರೇ ದೇವರು. ಗೌರವದ ಸಂಕೇತವಾಗಿ ನಾನು ಅವರಿಗಾಗಿ ದೇವಾಲಯವನ್ನು ನಿರ್ಮಿಸಿದ್ದೇನೆ' ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT