<p>ಶಿವಮೊಗ್ಗದ ನಟಿ ರಜನಿ ಹಲವು ಕನಸುಗಳನ್ನು ಕಟ್ಟಿಕೊಂಡು ಬಣ್ಣದ ಬದುಕಿಗೆ ಕಾಲಿಡುತ್ತಿದ್ದಾರೆ. ತ್ರಿಭಾಷೆಯ ಚಿತ್ರದಲ್ಲಿ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಅವರ ತಂದೆ ಶಿವಮೊಗ್ಗದ ಗಣೇಶ್ ಬಂಡವಾಳ ಹೂಡುತ್ತಿದ್ದಾರೆ.</p>.<p>ಸಿನಿಮಾ ನಿರ್ಮಾಣದ ಗುರಿ ಸಾಧಿಸಲು ಎಚ್.ಕೆ.ಆರ್. ಪ್ರೊಡಕ್ಷನ್ ಸಂಸ್ಥೆಯನ್ನು ಗಣೇಶ್ ಹುಟ್ಟುಹಾಕಿದ್ದಾರೆ. ತಮ್ಮ ಸಂಸ್ಥೆಯ ಮೊದಲ ಚಿತ್ರದಲ್ಲಿ ತಮ್ಮ ಪುತ್ರಿಯನ್ನೇ ನಾಯಕಿಯಾಗಿಸಿ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕೌಟುಂಬಿಕ ಕಥಾಹಂದರದ ಈ ಚಿತ್ರವನ್ನು ಕನ್ನಡ, ತಮಿಳು ಹಾಗೂ ಮರಾಠಿ ಭಾಷೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ‘ಹಲವು ಮಂದಿ ನಿರ್ದೇಶಕರು ಮತ್ತು ಪರಿಣತರೊಂದಿಗೆ ಕಥೆಯ ಬಗ್ಗೆ ಚರ್ಚೆ ನಡೆಸಿದ್ದು, ಇಡೀ ಕುಟುಂಬ ಸಮೇತ ಕುಳಿತು ಪ್ರೇಕ್ಷಕರು ನೋಡಬಹುದಾದಂತಹ ಕಥೆಯನ್ನು ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದೇವೆ’ ಎನ್ನುವುದು ಗಣೇಶ್ ನುಡಿ.</p>.<p>ಬೆಂಗಳೂರಿನಲ್ಲಿ ಎರಡುಮೂರು ಅಭಿನಯ ತರಬೇತಿ ಶಾಲೆಗಳಲ್ಲಿ ನಟನೆ ಮತ್ತು ಹಲವು ಬಗೆಯ ನೃತ್ಯಕಲಿತುಕೊಂಡೇ ರಜನಿ ಬಣ್ಣದ ಬದುಕಿಗೆ ಪ್ರವೇಶ ನೀಡುತ್ತಿದ್ದಾರೆ.</p>.<p>ಕನ್ನಡ ಹಾಗೂ ತಮಿಳು ಚಿತ್ರರಂಗದಲ್ಲೂ ಕೆಲಸ ಮಾಡಿರುವ ಸತ್ಯಸಾಮ್ರಾಟ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರು ನಿರ್ದೇಶಿಸಿದ ಪ್ರಮುಖ ಚಿತ್ರಗಳು ‘ಇಷ್ಟಾರ್ಥ’, ‘ಗಾಯತ್ರಿ’ ಹಾಗೂ ‘ವೀರಾಧಿವೀರ ರಾಜಾಧಿರಾಜ’.</p>.<p>ಚಿತ್ರಕ್ಕೆ ಇನ್ನಷ್ಟೆ ನಾಯಕ ಮತ್ತು ಇನ್ನುಳಿದ ಕಲಾವಿದರು ಹಾಗೂ ತಾಂತ್ರಿಕ ವರ್ಗದ ಆಯ್ಕೆ ನಡೆಯಬೇಕಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ತಾಣಗಳಲ್ಲಿ ಆಗಸ್ಟ್ನಿಂದ ಚಿತ್ರೀಕರಣ ಆರಂಭಿಸುವ ಯೋಜನೆ ಚಿತ್ರತಂಡದ್ದು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗದ ನಟಿ ರಜನಿ ಹಲವು ಕನಸುಗಳನ್ನು ಕಟ್ಟಿಕೊಂಡು ಬಣ್ಣದ ಬದುಕಿಗೆ ಕಾಲಿಡುತ್ತಿದ್ದಾರೆ. ತ್ರಿಭಾಷೆಯ ಚಿತ್ರದಲ್ಲಿ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಅವರ ತಂದೆ ಶಿವಮೊಗ್ಗದ ಗಣೇಶ್ ಬಂಡವಾಳ ಹೂಡುತ್ತಿದ್ದಾರೆ.</p>.<p>ಸಿನಿಮಾ ನಿರ್ಮಾಣದ ಗುರಿ ಸಾಧಿಸಲು ಎಚ್.ಕೆ.ಆರ್. ಪ್ರೊಡಕ್ಷನ್ ಸಂಸ್ಥೆಯನ್ನು ಗಣೇಶ್ ಹುಟ್ಟುಹಾಕಿದ್ದಾರೆ. ತಮ್ಮ ಸಂಸ್ಥೆಯ ಮೊದಲ ಚಿತ್ರದಲ್ಲಿ ತಮ್ಮ ಪುತ್ರಿಯನ್ನೇ ನಾಯಕಿಯಾಗಿಸಿ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕೌಟುಂಬಿಕ ಕಥಾಹಂದರದ ಈ ಚಿತ್ರವನ್ನು ಕನ್ನಡ, ತಮಿಳು ಹಾಗೂ ಮರಾಠಿ ಭಾಷೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ‘ಹಲವು ಮಂದಿ ನಿರ್ದೇಶಕರು ಮತ್ತು ಪರಿಣತರೊಂದಿಗೆ ಕಥೆಯ ಬಗ್ಗೆ ಚರ್ಚೆ ನಡೆಸಿದ್ದು, ಇಡೀ ಕುಟುಂಬ ಸಮೇತ ಕುಳಿತು ಪ್ರೇಕ್ಷಕರು ನೋಡಬಹುದಾದಂತಹ ಕಥೆಯನ್ನು ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದೇವೆ’ ಎನ್ನುವುದು ಗಣೇಶ್ ನುಡಿ.</p>.<p>ಬೆಂಗಳೂರಿನಲ್ಲಿ ಎರಡುಮೂರು ಅಭಿನಯ ತರಬೇತಿ ಶಾಲೆಗಳಲ್ಲಿ ನಟನೆ ಮತ್ತು ಹಲವು ಬಗೆಯ ನೃತ್ಯಕಲಿತುಕೊಂಡೇ ರಜನಿ ಬಣ್ಣದ ಬದುಕಿಗೆ ಪ್ರವೇಶ ನೀಡುತ್ತಿದ್ದಾರೆ.</p>.<p>ಕನ್ನಡ ಹಾಗೂ ತಮಿಳು ಚಿತ್ರರಂಗದಲ್ಲೂ ಕೆಲಸ ಮಾಡಿರುವ ಸತ್ಯಸಾಮ್ರಾಟ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರು ನಿರ್ದೇಶಿಸಿದ ಪ್ರಮುಖ ಚಿತ್ರಗಳು ‘ಇಷ್ಟಾರ್ಥ’, ‘ಗಾಯತ್ರಿ’ ಹಾಗೂ ‘ವೀರಾಧಿವೀರ ರಾಜಾಧಿರಾಜ’.</p>.<p>ಚಿತ್ರಕ್ಕೆ ಇನ್ನಷ್ಟೆ ನಾಯಕ ಮತ್ತು ಇನ್ನುಳಿದ ಕಲಾವಿದರು ಹಾಗೂ ತಾಂತ್ರಿಕ ವರ್ಗದ ಆಯ್ಕೆ ನಡೆಯಬೇಕಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ತಾಣಗಳಲ್ಲಿ ಆಗಸ್ಟ್ನಿಂದ ಚಿತ್ರೀಕರಣ ಆರಂಭಿಸುವ ಯೋಜನೆ ಚಿತ್ರತಂಡದ್ದು..</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>