ಜೂನ್ 14ರಂದು ಮುಂಬೈನ ಬಾಂದ್ರಾದ ತಮ್ಮ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ದೇಶದ ಗಮನ ಸೆಳೆದಿತ್ತು. ನಂತರ ಈ ಸಾವಿನ ಪ್ರಕರಣ ಹಲವು ತಿರುವು ಪಡೆದುಕೊಂಡಿತ್ತು.
ಶ್ವೇತಾ ಸಿಂಗ್ ಕೀರ್ತಿ ಅವರು ಕಳೆದ ವರ್ಷ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು, ‘ಸುಶಾಂತ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ, ನಮಗೆ ನ್ಯಾಯಕೊಡಿಸಿ‘ ಎಂದು ಮನವಿ ಮಾಡಿದ್ದರು.