<p><strong>ಉಡುಪಿ:</strong> ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ದಿಢೀರ್ ಎಂಬಂತೆ ಪ್ರತ್ಯಕ್ಷ ಆಗಿದ್ದಾರೆ. ತಮ್ಮೂರಿನಲ್ಲಿ ನಡೆದ ನೇಮೋತ್ಸವದಲ್ಲಿ ನಟ ರಕ್ಷಿತ್ ಶೆಟ್ಟಿ ಭಾಗಿಯಾದ್ದಾರೆ.</p>.ಅತ್ಯುತ್ತಮ ನಟ ಪ್ರಶಸ್ತಿ: ಈ ಮೂವರಿಗೆ ಧನ್ಯವಾದ ತಿಳಿಸಿದ ರಕ್ಷಿತ್ ಶೆಟ್ಟಿ.ಸಂಗೀತ ಶೃಂಗೇರಿ ಹೊಸ ಆಲ್ಬಂ ಸಾಂಗ್ ಬಿಡುಗಡೆ: ಬೋಲ್ಡ್ ಲುಕ್ನಲ್ಲಿ ಚಾರ್ಲಿ ನಟಿ.<p>ಉಡುಪಿಯ ಅಲೆವೂರಿನ ಕಲ್ಯಾಣ ನಗರದಲ್ಲಿ ನಡೆದ ವೈದ್ಯನಾಥ ಬಬ್ಬುಸ್ವಾಮಿ ದೈವದ ನೇಮೋತ್ಸವದಲ್ಲಿ ಕುಟುಂಬ ಸದಸ್ಯರ ಜೊತೆ ಅವರು ಪಾಲ್ಗೊಂಡಿದ್ದರು. ಅಲೆವೂರಿನ ದೊಡ್ಡಮನೆ ಮನೆತನದವರಾದ ರಕ್ಷಿತ್ ಶೆಟ್ಟಿ ಅವರು ಪ್ರತಿ ವರ್ಷವೂ ನೇಮೋತ್ಸವದಲ್ಲಿ ಭಾಗಿಯಾಗುತ್ತಾರೆ. ಈ ಬಾರಿಯೂ ಕುಟುಂಬದವರ ಜತೆ ನೇಮೋತ್ಸವಕ್ಕೆ ಹಾಜರಾಗಿದ್ದಾರೆ.</p><p>‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿ ಅವರು ಬೇರೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಗೊಂದಲ ಮನೆಮಾಡಿತ್ತು. ಅಲ್ಲದೆ ರಕ್ಷಿತ್, ಹೊಸ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ ಎಂಬ ಮಾತುಗಳು ಸಾಮಾಜಿಕ ಮಾಧ್ಯಮದಲ್ಲಿ ಕೇಳಿ ಬರುತಿತ್ತು. ಈ ಮಧ್ಯೆ ರಕ್ಷಿತ್ ಶೆಟ್ಟಿ ಮತ್ತೆ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ದಿಢೀರ್ ಎಂಬಂತೆ ಪ್ರತ್ಯಕ್ಷ ಆಗಿದ್ದಾರೆ. ತಮ್ಮೂರಿನಲ್ಲಿ ನಡೆದ ನೇಮೋತ್ಸವದಲ್ಲಿ ನಟ ರಕ್ಷಿತ್ ಶೆಟ್ಟಿ ಭಾಗಿಯಾದ್ದಾರೆ.</p>.ಅತ್ಯುತ್ತಮ ನಟ ಪ್ರಶಸ್ತಿ: ಈ ಮೂವರಿಗೆ ಧನ್ಯವಾದ ತಿಳಿಸಿದ ರಕ್ಷಿತ್ ಶೆಟ್ಟಿ.ಸಂಗೀತ ಶೃಂಗೇರಿ ಹೊಸ ಆಲ್ಬಂ ಸಾಂಗ್ ಬಿಡುಗಡೆ: ಬೋಲ್ಡ್ ಲುಕ್ನಲ್ಲಿ ಚಾರ್ಲಿ ನಟಿ.<p>ಉಡುಪಿಯ ಅಲೆವೂರಿನ ಕಲ್ಯಾಣ ನಗರದಲ್ಲಿ ನಡೆದ ವೈದ್ಯನಾಥ ಬಬ್ಬುಸ್ವಾಮಿ ದೈವದ ನೇಮೋತ್ಸವದಲ್ಲಿ ಕುಟುಂಬ ಸದಸ್ಯರ ಜೊತೆ ಅವರು ಪಾಲ್ಗೊಂಡಿದ್ದರು. ಅಲೆವೂರಿನ ದೊಡ್ಡಮನೆ ಮನೆತನದವರಾದ ರಕ್ಷಿತ್ ಶೆಟ್ಟಿ ಅವರು ಪ್ರತಿ ವರ್ಷವೂ ನೇಮೋತ್ಸವದಲ್ಲಿ ಭಾಗಿಯಾಗುತ್ತಾರೆ. ಈ ಬಾರಿಯೂ ಕುಟುಂಬದವರ ಜತೆ ನೇಮೋತ್ಸವಕ್ಕೆ ಹಾಜರಾಗಿದ್ದಾರೆ.</p><p>‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿ ಅವರು ಬೇರೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಗೊಂದಲ ಮನೆಮಾಡಿತ್ತು. ಅಲ್ಲದೆ ರಕ್ಷಿತ್, ಹೊಸ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ ಎಂಬ ಮಾತುಗಳು ಸಾಮಾಜಿಕ ಮಾಧ್ಯಮದಲ್ಲಿ ಕೇಳಿ ಬರುತಿತ್ತು. ಈ ಮಧ್ಯೆ ರಕ್ಷಿತ್ ಶೆಟ್ಟಿ ಮತ್ತೆ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>