ಕಾಮಿಡಿ ಜಾನರ್ನ ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್, ದಿಗಂತ್ ಹಾಗೂ ಲೂಸ್ ಮಾದ ಯೋಗಿ ಹಾಗೂ ಸಿರಿ ರವಿಕುಮಾರ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಬೇಕಿತ್ತು. ಆದರೆ ‘ಕಾಂತಾರ’ದ ಯಶಸ್ಸಿನ ಬೆನ್ನಲ್ಲೇ ಅದರ ಎರಡನೇ ಭಾಗದ ಸಿದ್ಧತೆಗೆ ರಿಷಬ್ ಇಳಿದ ಕಾರಣ, ಅವರು ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಿಂದ ಹೊರಗುಳಿದಿದ್ದರು. ಅವರ ಸ್ಥಾನಕ್ಕೆ ಲೂಸ್ ಮಾದ ಯೋಗಿ ಬಂದಿದ್ದಾರೆ. ಸಿನಿಮಾ ಬ್ಯಾಂಕಾಕ್ನಲ್ಲಿ ಚಿತ್ರೀಕರಣಗೊಂಡಿದೆ. ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಚಿತ್ರಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.