<p><strong>ಬೆಂಗಳೂರು: </strong>ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಯಲ್ಲಿ ತಮ್ಮ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದರಿಂದಾಗಿ ನಟ ರಕ್ಷಿತ್ ಶೆಟ್ಟಿ ನಗರದ 9ನೇ ಎಸಿಎಂಎಂ ನ್ಯಾಯಾಲಯ ಎದುರು ಸೋಮವಾರ ಹಾಜರಾದರು.</p>.<p>‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಿದ್ದ ಆರೋಪ ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋ ಮೇಲಿದೆ. ಅವರೆಲ್ಲರ ವಿರುದ್ಧ ಲಹರಿ ಸಂಸ್ಥೆಯವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.</p>.<p>ವಿಚಾರಣೆಗೆ ಹಲವು ಬಾರಿ ಗೈರಾಗಿದ್ದರಿಂದಾಗಿ ನಟ, ಸಂಗೀತ ನಿರ್ದೇಶಕ, ಪರಮ್ವಾ ಸ್ಟುಡಿಯೊ ಮಾಲೀಕರ ವಿರುದ್ಧ ಇತ್ತೀಚೆಗಷ್ಟೇ ವಾರೆಂಟ್ ಜಾರಿಯಾಗಿತ್ತು.</p>.<p>ಅದರನ್ವಯ ವಕೀಲರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ರಕ್ಷಿತ್ ಶೆಟ್ಟಿ ಹಾಜರಾದರು. ಶ್ಯೂರಿಟಿ ಪಡೆದು ನ್ಯಾಯಾಲಯು ಜಾಮೀನು ನೀಡಿತು. ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಯಲ್ಲಿ ತಮ್ಮ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದರಿಂದಾಗಿ ನಟ ರಕ್ಷಿತ್ ಶೆಟ್ಟಿ ನಗರದ 9ನೇ ಎಸಿಎಂಎಂ ನ್ಯಾಯಾಲಯ ಎದುರು ಸೋಮವಾರ ಹಾಜರಾದರು.</p>.<p>‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಿದ್ದ ಆರೋಪ ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋ ಮೇಲಿದೆ. ಅವರೆಲ್ಲರ ವಿರುದ್ಧ ಲಹರಿ ಸಂಸ್ಥೆಯವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.</p>.<p>ವಿಚಾರಣೆಗೆ ಹಲವು ಬಾರಿ ಗೈರಾಗಿದ್ದರಿಂದಾಗಿ ನಟ, ಸಂಗೀತ ನಿರ್ದೇಶಕ, ಪರಮ್ವಾ ಸ್ಟುಡಿಯೊ ಮಾಲೀಕರ ವಿರುದ್ಧ ಇತ್ತೀಚೆಗಷ್ಟೇ ವಾರೆಂಟ್ ಜಾರಿಯಾಗಿತ್ತು.</p>.<p>ಅದರನ್ವಯ ವಕೀಲರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ರಕ್ಷಿತ್ ಶೆಟ್ಟಿ ಹಾಜರಾದರು. ಶ್ಯೂರಿಟಿ ಪಡೆದು ನ್ಯಾಯಾಲಯು ಜಾಮೀನು ನೀಡಿತು. ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>