ಇದೇ ವಿಚಾರವಾಗಿ, ಹೈದರಾಬಾದ್ನಲ್ಲಿರುವ ತಮ್ಮ ಕಚೇರಿ ಮುಂದೆ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿ ರಾಮ್ ಗೋಪಾಲ್ ವರ್ಮಾ ಅವರು ಟಿಡಿಪಿ ವರಿಷ್ಠ ಎನ್.ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್ ಹಾಗೂ ಜನ ಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೈ.ಎಸ್.ರಾಜಶೇಖರ ರೆಡ್ಡಿ ಅವರ ಸಾವಿಗೆ ಸಂಬಂಧಿಸಿದ ಸನ್ನಿವೇಶಗಳ ಕುರಿತ ಕಥಾವಸ್ತು ಹೊಂದಿದ್ದ ಈ ಚಿತ್ರದಲ್ಲಿ ಮಾನಸ ರಾಧಾಕೃಷ್ಣನ್, ಅಜ್ಮಲ್ ಅಮೀರ್ ಹಾಗೂ ಸುರಭಿ ಪ್ರಭಾವತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.