<p><strong>ಚೆನ್ನೈ</strong>: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಜನನಾಯಕನಾಗಿ ಹೊರಹೊಮ್ಮಿದ್ದು, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ.</p><p>ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆಯುವ ಮೂಲಕ ವಿಜಯ್ ಅವರು, ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಡಿಎಂಕೆ 59 ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದುಕೊಂಡಿವೆ.</p><p>ವಿಜಯ್ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಶುಭ ಹಾರೈಸಿದ್ದಾರೆ. ತಮಿಳುನಾಡಿನಲ್ಲಿ ಉತ್ತಮ ಆಡಳಿತ ನಡೆಸುವಂತೆ ಅವರಿಗೆ ಮನವಿ ಮಾಡಿದ್ದಾರೆ.</p><p>ಇದರ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಮಾಡಿದ ಪೋಸ್ಟ್ವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಎಲ್ಲರ ಗಮನ ಸೆಳೆದಿದೆ.</p><p>ಬಾಲಕ ವಿಜಯ್, 'ಕಲೈಂಜರ್' ಎಂದೇ ಖ್ಯಾತರಾದ ಡಿಎಂಕೆ ಪಕ್ಷದ ಸ್ಥಾಪಕ ಎಂ. ಕರುಣಾನಿಧಿ ಅವರ ಹಿಂದೆ ನಿಂತಿರುವ ಹಳೆಯ ಭಾವಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.</p><p>‘ತನ್ನ ಹಿಂದಿರುವ ಹುಡುಗ ಮುಂದೊಂದು ದಿನ ತಮ್ಮ ಪಕ್ಷವನ್ನು ನಾಶ ಮಾಡುತ್ತಾನೆ ಎಂದು ಕರುಣಾನಿಧಿ ಕನಸು ಮನಸ್ಸಿನಲ್ಲೂ ಭಾವಿಸಿರಲಿಲ್ಲ’ ಎಂದು ಪೋಸ್ಟ್ನಲ್ಲಿ ವರ್ಮಾ ಬರೆದುಕೊಂಡಿದ್ದಾರೆ.</p><p>ಈ ಪೋಸ್ಟ್ಗೆ ಹಲವರು ಪ್ರತಿಕ್ರಿಯಿಸಿದ್ದು, ವರ್ಮಾ ಅವರ ಮಾತಿಗೆ ಸಮ್ಮತಿ ನೀಡಿದ್ದಾರೆ.</p><p>ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ಟಿವಿಕೆ ಅಭ್ಯರ್ಥಿ ಎದುರು ಹೀನಾಯ ಸೋಲು ಕಂಡಿದ್ದಾರೆ. ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಜನನಾಯಕನಾಗಿ ಹೊರಹೊಮ್ಮಿದ್ದು, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ.</p><p>ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆಯುವ ಮೂಲಕ ವಿಜಯ್ ಅವರು, ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಡಿಎಂಕೆ 59 ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದುಕೊಂಡಿವೆ.</p><p>ವಿಜಯ್ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಶುಭ ಹಾರೈಸಿದ್ದಾರೆ. ತಮಿಳುನಾಡಿನಲ್ಲಿ ಉತ್ತಮ ಆಡಳಿತ ನಡೆಸುವಂತೆ ಅವರಿಗೆ ಮನವಿ ಮಾಡಿದ್ದಾರೆ.</p><p>ಇದರ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಮಾಡಿದ ಪೋಸ್ಟ್ವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಎಲ್ಲರ ಗಮನ ಸೆಳೆದಿದೆ.</p><p>ಬಾಲಕ ವಿಜಯ್, 'ಕಲೈಂಜರ್' ಎಂದೇ ಖ್ಯಾತರಾದ ಡಿಎಂಕೆ ಪಕ್ಷದ ಸ್ಥಾಪಕ ಎಂ. ಕರುಣಾನಿಧಿ ಅವರ ಹಿಂದೆ ನಿಂತಿರುವ ಹಳೆಯ ಭಾವಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.</p><p>‘ತನ್ನ ಹಿಂದಿರುವ ಹುಡುಗ ಮುಂದೊಂದು ದಿನ ತಮ್ಮ ಪಕ್ಷವನ್ನು ನಾಶ ಮಾಡುತ್ತಾನೆ ಎಂದು ಕರುಣಾನಿಧಿ ಕನಸು ಮನಸ್ಸಿನಲ್ಲೂ ಭಾವಿಸಿರಲಿಲ್ಲ’ ಎಂದು ಪೋಸ್ಟ್ನಲ್ಲಿ ವರ್ಮಾ ಬರೆದುಕೊಂಡಿದ್ದಾರೆ.</p><p>ಈ ಪೋಸ್ಟ್ಗೆ ಹಲವರು ಪ್ರತಿಕ್ರಿಯಿಸಿದ್ದು, ವರ್ಮಾ ಅವರ ಮಾತಿಗೆ ಸಮ್ಮತಿ ನೀಡಿದ್ದಾರೆ.</p><p>ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ಟಿವಿಕೆ ಅಭ್ಯರ್ಥಿ ಎದುರು ಹೀನಾಯ ಸೋಲು ಕಂಡಿದ್ದಾರೆ. ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>