ನವದೆಹಲಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೋವಿಡ್–19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಕೆಲವು ವಾರಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.
ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅವರು ಅಗಲಿದ್ದಾರೆ.
‘ಲತಾ ಜೀ ಅವರ ನಿಧನವು ನನ್ನ ಹೃದಯವನ್ನು ಕಲುಕಿತು. ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಇದೇ ಅನುಭವ ಆಗಿದೆ. ಲತಾ ಅವರು ತಮ್ಮ ಹಾಡುಗಳ ಮೂಲಕ ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದ್ದಾರೆ. ಭಾರತ ರತ್ನ ಪುರಸ್ಕೃತೆ ಲತಾ ಅವರ ಸಾಧನೆಗಳು ಅನುಪಮವಾಗಿ ಉಳಿಯುತ್ತವೆ’ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
Lata-ji’s demise is heart-breaking for me, as it is for millions the world over. In her vast range of songs, rendering the essence and beauty of India, generations found expression of their inner-most emotions. A Bharat Ratna, Lata-ji’s accomplishments will remain incomparable. pic.twitter.com/rUNQq1RnAp
— President of India (@rashtrapatibhvn) February 6, 2022
‘ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಅದು ನನಗೆ ಸಿಕ್ಕ ಗೌರವವೆಂದು ಭಾವಿಸುತ್ತೇನೆ. ಅವರೊಂದಿಗಿನ ನನ್ನ ಸಂಭಾಷಣೆಗಳು ಅವಿಸ್ಮರಣೀಯವಾಗಿ ಉಳಿಯುತ್ತವೆ. ಲತಾ ದೀದಿ ಅವರ ನಿಧನಕ್ಕೆ ನನ್ನ ಸಹ ಭಾರತೀಯರೊಂದಿಗೆ ನಾನು ದುಃಖಿತನಾಗಿದ್ದೇನೆ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವನ ತಿಳಿಸುತ್ತೇನೆ. ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
I consider it my honour that I have always received immense affection from Lata Didi. My interactions with her will remain unforgettable. I grieve with my fellow Indians on the passing away of Lata Didi. Spoke to her family and expressed condolences. Om Shanti.
— Narendra Modi (@narendramodi) February 6, 2022
‘ಸಂಗೀತ ಕ್ಷೇತ್ರಕ್ಕೆ ಲತಾ ದೀದಿಯವರ ಕೊಡುಗೆ ಅಪಾರ. ಅವರು ತಮ್ಮ ಸುಮಧುರ ಕಂಠದ ಮೂಲಕ ಮೋಡಿ ಮಾಡಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಭಾರತೀಯ ಸಂಗೀತದ ಮಾಧುರ್ಯವನ್ನು ಪಸರಿಸಿದ್ದಾರೆ. ಸಂಗೀತ ಲೋಕಕ್ಕೆ ಅವರು ನೀಡಿದ ಕೊಡುಗೆಯನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅವರ ಸಾವು ನನಗೆ ವೈಯಕ್ತಿಕ ನಷ್ಟವಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
सुर व संगीत की पूरक लता दीदी ने अपनी सुर साधना व मंत्रमुग्ध कर देने वाली वाणी से न सिर्फ भारत बल्कि पूरे विश्व में हर पीढ़ी के जीवन को भारतीय संगीत की मिठास से सराबोर किया।
— Amit Shah (@AmitShah) February 6, 2022
संगीत जगत में उनके योगदान को शब्दों में पिरोना संभव नहीं है।
उनका निधन मेरे लिए व्यक्तिगत क्षति है। pic.twitter.com/uRwKwZa4KG
‘ಕಾಲಕಾಲಕ್ಕೆ ಲತಾ ದೀದಿಯವರ ವಾತ್ಸಲ್ಯ ಮತ್ತು ಆಶೀರ್ವಾದವನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. ಅಪ್ರತಿಮ ದೇಶಭಕ್ತಿ, ಮಧುರವಾದ ಮಾತು, ಸಜ್ಜನಿಕೆ, ಲತಾ ಅವರ ನೆನಪು ಸದಾ ನಮ್ಮೊಂದಿಗಿರುತ್ತದೆ. ದೇವರು ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ' ಎಂದು ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
‘ಲತಾ ಮಂಗೇಶ್ಕರ್ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಲತಾ ಅವರ ಧ್ವನಿಯು ಅಮರವಾಗಿರುತ್ತದೆ. ಅಭಿಮಾನಿಗಳ ಹೃದಯದಲ್ಲಿ ಸದಾ ಕಾಲ ಪ್ರತಿಧ್ವನಿಸುತ್ತಲೇ ಇರುತ್ತದೆ. ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Received the sad news of Lata Mangeshkar ji’s demise. She remained the most beloved voice of India for many decades.
— Rahul Gandhi (@RahulGandhi) February 6, 2022
Her golden voice is immortal and will continue to echo in the hearts of her fans.
My condolences to her family, friends and fans. pic.twitter.com/Oi6Wb2134M
Deeply saddened to learn about the passing away of #LataMangeshkar. She had in her voice the soul of this nation. My deepest condolences. Her music will remain with us forever. RIP. pic.twitter.com/w1Dw9TNDgS
— H D Devegowda (@H_D_Devegowda) February 6, 2022
ಮಧುರ ಕಂಠದ ಮೂಲಕ ದಶಕಗಳಿಂದ ಜನಮನವನ್ನು ರಂಜಿಸಿದ್ದ
— Siddaramaiah (@siddaramaiah) February 6, 2022
ಗಾನಕೋಗಿಲೆ
ಲತಾ ಮಂಗೇಶ್ಕರ್ ಸಾವು ನನ್ನಂತಹ ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಆಘಾತಕ್ಕೀಡು ಮಾಡಿದೆ.
ನಮ್ಮನ್ನು ಅಗಲಿ ಹೋದರೂ ಅಮರ
ಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ ಅಜರಾಮರ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ.#LataMangeshkar pic.twitter.com/VD4B4d7Mzx
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.