ಸಾಹಿತಿ ಗಿರೀಶ ಕಾರ್ನಾಡ ಅವರಿಗೆ ಈ ಕಥೆಯನ್ನು ಸಿನಿಮಾ ರೂಪಕ್ಕಿಳಿಸುವ ಆಸೆ ಇತ್ತಂತೆ. ಆದರೆ, ಅದು ಅವರಿಗೆ ಸಾಧ್ಯವಾಗಿರಲಿಲ್ಲ. ಅಲ್ಲದೆ, ನಿರ್ದೇಶಕ ಗಿರೀಶ ಕಾಸರವಳ್ಳಿ ಅವರಿಗೂ ಈ ಕಥೆಯನ್ನು ಸಿನಿಮಾ ಮಾಡುವ ಉದ್ದೇಶ ಇತ್ತಂತೆ. ಕಾರಣಾಂತರದಿಂದ ಅವರಿಗೂ ಅದು ಸಾಧ್ಯವಾಗಿರಲಿಲ್ಲ. ಆದರೆ, ಗಿರೀಶ ಕಾಸರವಳ್ಳಿ ಅವರೇ ಈ ಚಿತ್ರಕ್ಕೆ ಸ್ಕ್ರಿಫ್ಟ್ ಬರೆದಿದ್ದಾರೆ. ಎರಡು ಹಾಡುಗಳಿದ್ದು, ಕೆ. ಕಲ್ಯಾಣ್ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ವಿಶ್ವನಾಥ್ ಅವರದ್ದು.