ರಾಜ್ ಬಿ.ಶೆಟ್ಟಿ ನಟನೆಯ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ಸೆಟ್ಟೇರಿದ್ದಾಗ ರಮ್ಯಾ ನಾಯಕಿಯಾಗಿದ್ದರು. ಇದು ಅವರ ಕಂಬ್ಯಾಕ್ ಸಿನಿಮಾ ಎನ್ನಲಾಗಿತ್ತು. ಕೆಲ ಸಮಯದ ಬಳಿಕ ಈ ಸಿನಿಮಾದಿಂದ ಅವರು ಹೊರನಡೆದಿದ್ದರು. ಬಳಿಕ ‘ಉತ್ತರಕಾಂಡ’ ಸಿನಿಮಾ ಒಪ್ಪಿಕೊಂಡಿದ್ದರು. ‘ರತ್ನನ್ ಪ್ರಪಂಚ’ ಸಿನಿಮಾ ಯಶಸ್ಸಿನ ಬಳಿಕ ಕೆ.ಆರ್.ಜಿ ಸ್ಟುಡಿಯೋಸ್, ನಟ ಡಾಲಿ ಧನಂಜಯ ಮತ್ತು ರೋಹಿತ್ ಪದಕಿ ಕಾಂಬಿನೇಷನ್ನಲ್ಲಿ ಈ ಸಿನಿಮಾ ಸೆಟ್ಟೇರಿದೆ. ಉತ್ತರ ಕರ್ನಾಟಕ ಭಾಷೆಯಲ್ಲೇ ಸಿನಿಮಾ ಇರುವ ಕಾರಣ, ಚಿತ್ರಕ್ಕಾಗಿ ಭಾಷೆ, ಉಡುಗೆ-ತೊಡುಗೆಯ ಮೇಲೆ ಗಂಭೀರವಾಗಿ ಕಸರತ್ತು ನಡೆಸಿದ್ದರು. ‘ಉತ್ತರಕಾಂಡ’ದಲ್ಲಿ ಧನಂಜಯ ಹಾಗೂ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಮುಖ್ಯಭೂಮಿಕೆಯಲ್ಲಿದ್ದಾರೆ.