ಈ ಚಿತ್ರದ ನಾಯಕರಾಗಿ ಶ್ರೀನಗರ ಕಿಟ್ಟಿ ಮುಂದುವರೆದಿದ್ದಾರೆ. ನಾಗಶೇಖರ್ ಅವರೇ ನಿರ್ದೇಶನ ಮಾಡುತ್ತಿದ್ದು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರ 2024ರ ದಸರಾಗೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಕಾಂಬಿನೇಷನ್ ಜನರಿಗೆ ಇಷ್ಟವಾಗಿತ್ತು. ರಮ್ಯಾ ಅವರೇ ಈ ಚಿತ್ರದಲ್ಲೂ ಮುಂದುವರಿಯಬೇಕು ಎಂಬುದು ಅಭಿಮಾನಿಗಳು ಬಯಸಿದ್ದರು. ಆದರೆ ಈ ಚಿತ್ರದಿಂದ ರಮ್ಯಾ ಹೊರಬಂದಿದ್ದಾರೆ.