ಮಲಯಾಳಂನ ಮೂಲ ಚಿತ್ರದಲ್ಲಿ ಪೃಥ್ವಿರಾಜ್ ನಿರ್ವಹಿಸಿದ ಪಾತ್ರವನ್ನು ತೆಲುಗಿನಲ್ಲಿ ರಾನಾ ದಗ್ಗುಬಾಟಿ ನಿರ್ವಹಿಸಲಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್ಟೇನ್ಮೆಂಟ್, ಚಿತ್ರದ ಮತ್ತೊಂದು ಪ್ರಮುಖ ‘ಅಯ್ಯಪ್ಪನ್’ ಪಾತ್ರಕ್ಕೆ ಬಣ್ಣ ಹಚ್ಚುವಂತೆ ರವಿತೇಜಾ ಅವರ ಬಳಿ ಮಾತುಕತೆ ನಡೆಸಿದೆ. ಈ ಹಿಂದೆ ಈ ಪಾತ್ರಕ್ಕೆ ನಂದಮೂರಿ ಬಾಲಕೃಷ್ಣ ಅವರ ಬಳಿ ಸಂಸ್ಥೆ ಮಾತುಕತೆ ನಡೆಸಿತ್ತು. ಆದರೆ ಅವರು ಬೇರೆ ಚಿತ್ರಗಳನ್ನು ಒಪ್ಪಿಕೊಂಡಿದ್ದರಿಂದ ಚಿತ್ರೀಕರಣಕ್ಕೆ ದಿನಾಂಕ ಸರಿಹೊಂದದೇ ಹೋಗಿದ್ದರಿಂದ ಅವರು ಈ ಚಿತ್ರವನ್ನು ಒಪ್ಪಿಕೊಂಡಿಲ್ಲ ಎಂದು ವರದಿಗಳು ತಿಳಿಸಿವೆ. ಕೊರೊನಾ ಲಾಕ್ಡೌನ್ ಸಂಪೂರ್ಣ ತೆರವಾದ ನಂತರ ಚಿತ್ರತಂಡಪಾತ್ರ, ಕಲಾವಿದರ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿದೆ.