ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಭೂಮಿ ಕಥನ

Last Updated 17 ಅಕ್ಟೋಬರ್ 2019, 19:30 IST
ಅಕ್ಷರ ಗಾತ್ರ

ಮಾನಸಿ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಣಭೂಮಿ’ ಸಿನಿಮಾ ನವೆಂಬರ್‌ನಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ‘ಹುಟ್ಟು ಅನಿವಾರ್ಯ ಆದ್ರೆ ಸಾವು ಚರಿತ್ರೆ ಆಗಬೇಕು’ ಎಂಬ ಅಡಿಬರಹ ಈ ಚಿತ್ರಕ್ಕಿದೆ.

ಚಿರಂಜೀವಿ ದೀಪಕ್ ನಿರ್ದೇಶನದ ಜೊತೆಗೆ ಬಂಡವಾಳ ಕೂಡ ಹೂಡಿದ್ದಾರೆ. ಈ ಹಿಂದೆ ಅವರು ‘ಜೋಕಾಲಿ’ ಚಿತ್ರ ನಿರ್ದೇಶಿಸಿದ್ದರು. ಮಂಜುನಾಥ್ ಪ್ರಭು ಮತ್ತು ಹೇಮಂತ್ ದೇಶಹಳ್ಳಿ ಸಹ ನಿರ್ಮಾಪಕರಾಗಿದ್ದಾರೆ. ಇದೊಂದು ಕ್ರೈಮ್‌, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಸಾಹಸಮಯ ಚಿತ್ರ. ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಪ್ರದೀಪ್ ವರ್ಮಾ ಸಂಗೀತ ಸಂಯೋಜಿಸಿದ್ದಾರೆ. ವಿಜಯ್‌ ಭರಮಸಾಗರ ಸಾಹಿತ್ಯ ರಚಿಸಿದ್ದಾರೆ. ಛಾಯಾಗ್ರಹಣ ನಾಗಾರ್ಜುನ್ ಅವರದು. ‘ಕರ್ವ’ ವೆಂಕಿ ಅವರ ಸಂಕಲನವಿದೆ. ನಿರಂಜನ್ ಒಡೆಯರ್, ಕಾರುಣ್ಯ ರಾಮ್, ಶೀತಲ್ ಶೆಟ್ಟಿ, ಆರ್. ಭಟ್, ರಥಾವರ ಲೋಕಿ, ಡ್ಯಾನಿ ಕುಟ್ಟಪ್ಪ ಇದ್ದಾರೆ.
ಇದನ್ನೂ ಓದಿ:ಕಿರಗೂರಿನ ಸುಂದರಿಯರು!

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT