ಬಾಲಿವುಡ್ನಲ್ಲಿಬಯೋಪಿಕ್ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಇದೀಗಸ್ವಾತಂತ್ರ್ಯ ಹೋರಾಟಗಾರರಾದ ‘ವೀರ್ ಸಾವರ್ಕರ್‘ ಅವರ ಜೀವನ ಚರಿತ್ರೆಯನ್ನು ತೆರೆಯ ಮೇಲೆ ತರಲಾಗುತ್ತಿದೆ.
ನಿರ್ದೇಶಕ ಮಹೇಶ್ ಮಾಂಜ್ರೇಕರ್ ಅವರು‘ಸ್ವತಂತ್ರ ವೀರ್ ಸಾವರ್ಕರ್’ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ನಟ ರಣದೀಪ್ ಹೂಡ ವೀರ್ ಸಾವರ್ಕರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಸಾವರ್ಕರ್ ಜೀವನ ಚರಿತ್ರೆಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎಂದು ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾರ್ವಕರ್ ಪಾತ್ರ ಮಾಡುವುದು ಒಂದು ಗೌರವ ಎಂದು ರಣದೀಪ್ ಹೂಡ ತಿಳಿಸಿದ್ದಾರೆ.
ಭಗತ್ ಸಿಂಗ್, ರಾಜ್ಗುರು, ಸುಖದೇವ್ ಹುತಾತ್ಮರ ದಿನವಾದ ಇಂದು ಸಾರ್ವಕರ್ ಸಿನಿಮಾವನ್ನು ಘೋಷಣೆ ಮಾಡಲಾಗಿದೆ. ಇನ್ನು ಸಿನಿಮಾದ ಪಾತ್ರವರ್ಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ಬರಬೇಕಿದೆ.