ರಾಜಕುಮಾರ್ ಅಸ್ಕಿ ನಿರ್ದೇಶನದ ಚಿತ್ರಕ್ಕೆ ಹೊಯ್ಸಳ ಕೊಣನೂರು ಬಂಡವಾಳ ಹೂಡಿದ್ದಾರೆ. ‘ಜನಪದ ಸೊಗಡಿನ ಈ ಸಿನಿಮಾ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿದೆ. ಪುನೀತ್ ರಾಜಕುಮಾರ್ ಅವರು ಈ ಚಿತ್ರದಲ್ಲಿ ನಟಿಸಬೇಕಿತ್ತು, ಆದರೆ ಆಗಲಿಲ್ಲ. ಈಗ ಅದೇ ಮನೆಯ ರಾಘವೇಂದ್ರ ರಾಜಕುಮಾರ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜ.19ರಂದು ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು ರಂಗಾಯಣ ರಘು.