<p>ಬಾಲಿವುಡ್ ನಟ ರಣವೀರ್ ಸಿಂಗ್ ಭಾರಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ 'ಡಾನ್ 3' ಚಿತ್ರದಿಂದ ದಿಢೀರನೆ ಹೊರಬಂದಿದ್ದಾರೆ. ಹೀಗಾಗಿ 'ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್' ನಟನ ವಿರುದ್ಧ ಅಸಹಕಾರ ಆದೇಶ ಹೊರಡಿಸಿದೆ.</p><p>ಈ ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ನಿರ್ಮಾಪಕರಾದ ಸಂಜಯ್ ಗುಪ್ತಾ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ‘ಒಬ್ಬ ಅತ್ಯುತ್ತಮ ನಟ ಚಿತ್ರೀಕರಣ ಮಾಡುವಾಗ ಕನಿಷ್ಠ 300 ಜನ ಕಾರ್ಮಿಕರು ಸೆಟ್ನಲ್ಲಿ ಕೆಲಸ ಮಾಡುತ್ತಾರೆ. ನೀವು ನಟನನ್ನು ನಿಷೇಧಿಸುವುದರಿಂದ ಆ ನಟನಿಗೆ ಮಾತ್ರವಲ್ಲದೆ, ಕಾರ್ಮಿಕರ ಜೀವನೋಪಾಯವನ್ನು ಕಸಿದುಕೊಳ್ಳುತ್ತಿದ್ದೀರಿ. ಇದು ಸಮಂಜಸವಲ್ಲ’ ಎಂದು ಬರೆದುಕೊಂಡಿದ್ದಾರೆ.</p>.<p><strong>ಏನಿದು ಘಟನೆ?</strong></p><p>ಸಿನಿಮಾ ಚಿತ್ರೀಕರಣ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ರಣವೀರ್ ಸಿಂಗ್ 'ಡಾನ್ 3' ಚಿತ್ರದಿಂದ ಹೊರನಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದರಿಂದಾಗಿ ಪ್ರಿ-ಪ್ರೊಡಕ್ಷನ್ ಕೆಲಸಗಳಿಗಾಗಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿದ್ದ ಫರ್ಹಾನ್ ಅಖರ್ ಮತ್ತು ರಿತೇಶ್ ಸಿಝಾನಿ ಅವರ 'ಎಕ್ಸೆಲ್ ಎಂಟರ್ಟೈನ್ಮೆಂಟ್' ನಿರ್ಮಾಣ ಸಂಸ್ಥೆಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಈ ಬೆಳವಣಿಗೆಯ ನಂತರ 'ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ' ಕೂಡ ಮಧ್ಯಪ್ರವೇಶಿಸಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸಿದೆಯಾದರೂ, ಯಾವುದೇ ಅಂತಿಮ ಪರಿಹಾರ ಸಿಕ್ಕಿಲ್ಲ.</p><p>ಈ ಕುರಿತು ಪ್ರತಿಕ್ರಿಯಿಸಿರುವ FWICE ಮುಖ್ಯ ಸಲಹೆಗಾರ ಅಶೋಕ್ ಪಂಡಿತ್, 'ಇದು ಅತ್ಯಂತ ಗಂಭೀರವಾದ ವಿಷಯ. ಇತ್ತೀಚಿನ ದಿನಗಳಲ್ಲಿ ನಟರು ಕೊನೆಯ ಕ್ಷಣದಲ್ಲಿ ಪ್ರಾಜೆಕ್ಟ್ಗಳಿಂದ ಹೊರನಡೆಯುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಬೇಜವಾಬ್ದಾರಿ ವರ್ತನೆಗಳಿಂದ ಚಿತ್ರರಂಗದ ಸ್ಥಿರತೆ ಹಾಳಾಗುವುದಲ್ಲದೆ, ದೊಡ್ಡ ಬಜೆಟ್ ಸಿನಿಮಾಗಳನ್ನು ನಂಬಿಕೊಂಡಿರುವ ನೂರಾರು ಕಾರ್ಮಿಕರು ಮತ್ತು ಹೂಡಿಕೆದಾರರ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಇತ್ತೀಚೆಗಷ್ಟೇ ಆದಿತ್ಯ ಧರ್ ನಿರ್ದೇಶನದ 'ಧುರಂಧರ್: ದಿ ರಿವೆಂಜ್' ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸದ್ಯ FWICE ಕೈಗೊಂಡಿರುವ ಈ ಕಠಿಣ ನಿರ್ಧಾರದ ಬಗ್ಗೆ ರಣವೀರ್ ಸಿಂಗ್ ಆಗಲಿ ಅಥವಾ ಅವರ ಆಪ್ತರಾಗಲಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. 'ಪದ್ಮಾವತ್', 'ಸಿಂಹ', 'ಬಾಜೀರಾವ್ ಮಸ್ತಾನಿ', 'ಗಲ್ಲಿ ಬಾಯ್' ಮತ್ತು 'ರಾಮ್-ಲೀಲಾ' ಅಂತಹ ಬ್ಲಾಕ್ಬಸ್ಟರ್ ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನಟನಿಗೆ ಇದು ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ.</p><p>ನಿಷೇಧದ ಪ್ರಕಾರ, FWICE ಒಕ್ಕೂಟದ ಅಡಿಯಲ್ಲಿ ಬರುವ ಯಾವುದೇ ಕಲಾವಿದರು ಅಥವಾ ತಾಂತ್ರಿಕ ಸಿಬ್ಬಂದಿ ರಣವೀರ್ ಸಿಂಗ್ ಅವರೊಂದಿಗೆ ಕೆಲಸ ಮಾಡುವಂತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಲಿವುಡ್ ನಟ ರಣವೀರ್ ಸಿಂಗ್ ಭಾರಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ 'ಡಾನ್ 3' ಚಿತ್ರದಿಂದ ದಿಢೀರನೆ ಹೊರಬಂದಿದ್ದಾರೆ. ಹೀಗಾಗಿ 'ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್' ನಟನ ವಿರುದ್ಧ ಅಸಹಕಾರ ಆದೇಶ ಹೊರಡಿಸಿದೆ.</p><p>ಈ ಆದೇಶವನ್ನು ಪ್ರಶ್ನಿಸಿ ಚಲನಚಿತ್ರ ನಿರ್ಮಾಪಕರಾದ ಸಂಜಯ್ ಗುಪ್ತಾ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ‘ಒಬ್ಬ ಅತ್ಯುತ್ತಮ ನಟ ಚಿತ್ರೀಕರಣ ಮಾಡುವಾಗ ಕನಿಷ್ಠ 300 ಜನ ಕಾರ್ಮಿಕರು ಸೆಟ್ನಲ್ಲಿ ಕೆಲಸ ಮಾಡುತ್ತಾರೆ. ನೀವು ನಟನನ್ನು ನಿಷೇಧಿಸುವುದರಿಂದ ಆ ನಟನಿಗೆ ಮಾತ್ರವಲ್ಲದೆ, ಕಾರ್ಮಿಕರ ಜೀವನೋಪಾಯವನ್ನು ಕಸಿದುಕೊಳ್ಳುತ್ತಿದ್ದೀರಿ. ಇದು ಸಮಂಜಸವಲ್ಲ’ ಎಂದು ಬರೆದುಕೊಂಡಿದ್ದಾರೆ.</p>.<p><strong>ಏನಿದು ಘಟನೆ?</strong></p><p>ಸಿನಿಮಾ ಚಿತ್ರೀಕರಣ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ರಣವೀರ್ ಸಿಂಗ್ 'ಡಾನ್ 3' ಚಿತ್ರದಿಂದ ಹೊರನಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದರಿಂದಾಗಿ ಪ್ರಿ-ಪ್ರೊಡಕ್ಷನ್ ಕೆಲಸಗಳಿಗಾಗಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿದ್ದ ಫರ್ಹಾನ್ ಅಖರ್ ಮತ್ತು ರಿತೇಶ್ ಸಿಝಾನಿ ಅವರ 'ಎಕ್ಸೆಲ್ ಎಂಟರ್ಟೈನ್ಮೆಂಟ್' ನಿರ್ಮಾಣ ಸಂಸ್ಥೆಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಈ ಬೆಳವಣಿಗೆಯ ನಂತರ 'ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ' ಕೂಡ ಮಧ್ಯಪ್ರವೇಶಿಸಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸಿದೆಯಾದರೂ, ಯಾವುದೇ ಅಂತಿಮ ಪರಿಹಾರ ಸಿಕ್ಕಿಲ್ಲ.</p><p>ಈ ಕುರಿತು ಪ್ರತಿಕ್ರಿಯಿಸಿರುವ FWICE ಮುಖ್ಯ ಸಲಹೆಗಾರ ಅಶೋಕ್ ಪಂಡಿತ್, 'ಇದು ಅತ್ಯಂತ ಗಂಭೀರವಾದ ವಿಷಯ. ಇತ್ತೀಚಿನ ದಿನಗಳಲ್ಲಿ ನಟರು ಕೊನೆಯ ಕ್ಷಣದಲ್ಲಿ ಪ್ರಾಜೆಕ್ಟ್ಗಳಿಂದ ಹೊರನಡೆಯುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಬೇಜವಾಬ್ದಾರಿ ವರ್ತನೆಗಳಿಂದ ಚಿತ್ರರಂಗದ ಸ್ಥಿರತೆ ಹಾಳಾಗುವುದಲ್ಲದೆ, ದೊಡ್ಡ ಬಜೆಟ್ ಸಿನಿಮಾಗಳನ್ನು ನಂಬಿಕೊಂಡಿರುವ ನೂರಾರು ಕಾರ್ಮಿಕರು ಮತ್ತು ಹೂಡಿಕೆದಾರರ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಇತ್ತೀಚೆಗಷ್ಟೇ ಆದಿತ್ಯ ಧರ್ ನಿರ್ದೇಶನದ 'ಧುರಂಧರ್: ದಿ ರಿವೆಂಜ್' ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸದ್ಯ FWICE ಕೈಗೊಂಡಿರುವ ಈ ಕಠಿಣ ನಿರ್ಧಾರದ ಬಗ್ಗೆ ರಣವೀರ್ ಸಿಂಗ್ ಆಗಲಿ ಅಥವಾ ಅವರ ಆಪ್ತರಾಗಲಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. 'ಪದ್ಮಾವತ್', 'ಸಿಂಹ', 'ಬಾಜೀರಾವ್ ಮಸ್ತಾನಿ', 'ಗಲ್ಲಿ ಬಾಯ್' ಮತ್ತು 'ರಾಮ್-ಲೀಲಾ' ಅಂತಹ ಬ್ಲಾಕ್ಬಸ್ಟರ್ ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನಟನಿಗೆ ಇದು ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ.</p><p>ನಿಷೇಧದ ಪ್ರಕಾರ, FWICE ಒಕ್ಕೂಟದ ಅಡಿಯಲ್ಲಿ ಬರುವ ಯಾವುದೇ ಕಲಾವಿದರು ಅಥವಾ ತಾಂತ್ರಿಕ ಸಿಬ್ಬಂದಿ ರಣವೀರ್ ಸಿಂಗ್ ಅವರೊಂದಿಗೆ ಕೆಲಸ ಮಾಡುವಂತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>