<p><strong>ಬೆಂಗಳೂರು:</strong> ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದಲ್ಲಿನ ‘ದೈವ’ ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ನಟನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.</p>.<p>ಪ್ರಶಾಂತ್ ಮೆಥಲ್ ಎಂಬುವವರು ದೂರು ನೀಡಿದ್ದಾರೆ. ದೂರುದಾರರಿಗೆ ಸ್ವೀಕೃತಿ ಪತ್ರ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಪೊಲೀಸರು ಹೇಳಿದರು.</p>.<p>ರಣವೀರ್ ಸಿಂಗ್ ಅವರು ಹಿಂದೂಗಳು ಹಾಗೂ ಕರ್ನಾಟಕದ ತುಳು ಭಾಷಿಕರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಿಂದ ನೋವು ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.‘ದೈವ’ವನ್ನು ‘ದೆವ್ವ’ವೆಂದ ರಣ್ವೀರ್ ಸಿಂಗ್ .<p>ಗೋವಾದಲ್ಲಿ ನ.28ರಂದು ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ರಣವೀರ್ ಸಿಂಗ್ ಅಪಹಾಸ್ಯ ಮಾಡಿದ್ದಾರೆ. ನಟನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ಗಳಾದ 299, 302, 196, 352ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.</p>.<p>ನಟ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ಬಳಿಕ ರಣವೀರ್ ಸಿಂಗ್ ಅವರು ಕ್ಷಮೆ ಕೋರಿದ್ದರು. </p>.ಕಾಂತಾರ ದೈವಕ್ಕೆ ಅಪಮಾನ: ರಣವೀರ್ ಸಿಂಗ್ ವಿರುದ್ಧ ದೂರು ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದಲ್ಲಿನ ‘ದೈವ’ ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ನಟನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.</p>.<p>ಪ್ರಶಾಂತ್ ಮೆಥಲ್ ಎಂಬುವವರು ದೂರು ನೀಡಿದ್ದಾರೆ. ದೂರುದಾರರಿಗೆ ಸ್ವೀಕೃತಿ ಪತ್ರ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಪೊಲೀಸರು ಹೇಳಿದರು.</p>.<p>ರಣವೀರ್ ಸಿಂಗ್ ಅವರು ಹಿಂದೂಗಳು ಹಾಗೂ ಕರ್ನಾಟಕದ ತುಳು ಭಾಷಿಕರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಿಂದ ನೋವು ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.‘ದೈವ’ವನ್ನು ‘ದೆವ್ವ’ವೆಂದ ರಣ್ವೀರ್ ಸಿಂಗ್ .<p>ಗೋವಾದಲ್ಲಿ ನ.28ರಂದು ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ರಣವೀರ್ ಸಿಂಗ್ ಅಪಹಾಸ್ಯ ಮಾಡಿದ್ದಾರೆ. ನಟನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ಗಳಾದ 299, 302, 196, 352ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.</p>.<p>ನಟ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ಬಳಿಕ ರಣವೀರ್ ಸಿಂಗ್ ಅವರು ಕ್ಷಮೆ ಕೋರಿದ್ದರು. </p>.ಕಾಂತಾರ ದೈವಕ್ಕೆ ಅಪಮಾನ: ರಣವೀರ್ ಸಿಂಗ್ ವಿರುದ್ಧ ದೂರು ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>