<p><strong>ನವದೆಹಲಿ</strong>: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.</p><p>ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಭೂಪಿಂದರ್ ಸಿಂಗ್, ಭವಿಷ್ಯದಲ್ಲಿ ಇದೇ ರೀತಿಯ ಕೃತ್ಯ ಎಸಗಬಹುದು ಎಂದು ಪೊಲೀಸರು ಭಾವಿಸಿದ್ದಾರೆ ಎಂಬ ಮಾತ್ರಕ್ಕೆ ಅವರನ್ನು ಕಂಬಿಗಳ ಹಿಂದೆ ಇಡಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಪ್ರಕರಣದ ಇಬ್ಬರು ಸಹ-ಆರೋಪಿಗಳಿಗೆ ಈ ಹಿಂದೆ ಜಾಮೀನು ನೀಡಲಾಗಿದೆ. ದೂರುದಾರರ ಮೇಲೆ ಪ್ರಭಾವ ಬೀರಬಹುದೆಂದು ಪೊಲೀಸರಿಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ, ಅದನ್ನು ಪ್ರಶ್ನಿಸುತ್ತಿದ್ದರು ಎಂದು ನ್ಯಾಯಾಲಯ ಹೇಳಿದೆ.</p>.ಯುದ್ಧ ನಿಲ್ಲಿಸುವ ಮೋದಿಗೆ ಭಾರತ-ಪಾಕ್ ಪಂದ್ಯ ನಿಲ್ಲಿಸಲಾಗುತ್ತಿಲ್ಲ: ಸಂಜಯ್ ಲೇವಡಿ.ಸೇನೆ ಬದಲು ರಾಷ್ಟ್ರವಿರೋಧಿ ಶಕ್ತಿಯನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ:ಮೋದಿ ಕಿಡಿ. <p>ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಮನೆ ಪಾರ್ಟಿಯಲ್ಲಿ ನನಗೆ ಮದ್ಯ ಕುಡಿಸಿ, ಸ್ನಾನಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ಈ ಹಿಂದೆ ಆರೋಪಿಸಿದ್ದರು. ಈ ಘಟನೆಯನ್ನು ತನ್ನ ಫೋನ್ನಲ್ಲಿ ಚಿತ್ರೀಕರಿಸಿ ನಂತರ ಫೋನ್ ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆ ಆರೋಪಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p><p>ಘಟನೆ ನಡೆದ ಮೂರು ವಾರಗಳ ಬಳಿಕ ಆರೋಪಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇದಕ್ಕಿಂತ ಮುಂಚೆ ಏಕೆ ನೋಟಿಸ್ ನೀಡಲಿಲ್ಲ. ಏಕೆ ವಿಚಾರಣೆ ನಡೆಸಲಿಲ್ಲ. ಕಳೆದು ಹೋಗಿರುವ ಫೋನ್ ಪತ್ತೆ ಹಚ್ಚಲು ಯಾವುದೇ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ ಎಂದು ನ್ಯಾಯಾಲಯ ಪ್ರಶ್ನಿಸಿದೆ.</p>.14 ಕೋಟಿ ಸದಸ್ಯರು; ಬಿಜೆಪಿ ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ: ನಡ್ಡಾ.ಗಣೇಶ ವಿಸರ್ಜನೆ ವೇಳೆ ಮೃತಪಟ್ಟವರಿಗೆ ಪರಿಹಾರ ನೀಡಲು ಮೀನಮೇಷ: ಶೋಭಾ ಕಿಡಿ. <p>ಆರೋಪಿಯು ಈ ಹಿಂದೆ ಯಾವುದೇ ಅಪರಾಧದಲ್ಲಿ ಭಾಗಿಯಾಗಿಲ್ಲ. ಆರೋಪಿ ಪರಾರಿಯಾಗುವ ಅವಕಾಶವಿದೆ ಎಂಬ ಹೇಳಿಕೆಗೆ ಉತ್ತರಿಸಿದ ನ್ಯಾಯಾಲಯ ಪ್ರಕರಣ ದಾಖಲಾದ ದಿನವೇ ಆರೋಪಿ ಪರಾರಿಯಾಗಬೇಕಿತ್ತಲ್ಲವೇ?, ಪೊಲೀಸರು ಶಂಕೆ ವ್ಯಕ್ತಪಡಿಸಿದ ಮಾತ್ರಕ್ಕೆ ಜಾಮೀನು ನಿರಾಕರಿಸಲಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.</p><p>ಪ್ರಕರಣ ಸಂಬಂಧ ವರದಿ ಸಲ್ಲಿಸಲು ಹಾಗೂ ಮುಂದಿನ ಪ್ರಕ್ರಿಯೆಗಳಿಗೆ ಪೊಲೀಸರು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ನ್ಯಾಯಾಲಯದ ಗಮನಕ್ಕೆ ತರಲಾದ ಸಂಗತಿಗಳನ್ನು ಪರಿಶೀಲಿಸಿ ಜಾಮೀನು ಅರ್ಜಿಗೆ ಅರ್ಹತೆ ಹೊಂದಿರುವುದರಿಂದ ಜಾಮೀನನ್ನು ಅನುಮತಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.</p>.ಬೆಳಗಾವಿ: ಭಾವೈಕ್ಯ ಮೆರೆದ ಈದ್–ಮಿಲಾದ್; ಮುಸ್ಲಿಮರೊಂದಿಗೆ ಹಿಂದೂಗಳು ಭಾಗಿ.Visual Story: ವಿಭಿನ್ನ ಉಡುಗೆಯಲ್ಲಿ ನಟಿ ರುಕ್ಮಿಣಿ ವಸಂತ್.ದೆಹಲಿ: ಫ್ಲೈಓವರ್ನಿಂದ ರೈಲ್ವೆ ಹಳಿ ಮೇಲೆ ಬಿದ್ದ ಕಾರು, ಚಾಲಕನಿಗೆ ಗಾಯ.ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ₹5 ಕೋಟಿ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.</p><p>ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಭೂಪಿಂದರ್ ಸಿಂಗ್, ಭವಿಷ್ಯದಲ್ಲಿ ಇದೇ ರೀತಿಯ ಕೃತ್ಯ ಎಸಗಬಹುದು ಎಂದು ಪೊಲೀಸರು ಭಾವಿಸಿದ್ದಾರೆ ಎಂಬ ಮಾತ್ರಕ್ಕೆ ಅವರನ್ನು ಕಂಬಿಗಳ ಹಿಂದೆ ಇಡಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಪ್ರಕರಣದ ಇಬ್ಬರು ಸಹ-ಆರೋಪಿಗಳಿಗೆ ಈ ಹಿಂದೆ ಜಾಮೀನು ನೀಡಲಾಗಿದೆ. ದೂರುದಾರರ ಮೇಲೆ ಪ್ರಭಾವ ಬೀರಬಹುದೆಂದು ಪೊಲೀಸರಿಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ, ಅದನ್ನು ಪ್ರಶ್ನಿಸುತ್ತಿದ್ದರು ಎಂದು ನ್ಯಾಯಾಲಯ ಹೇಳಿದೆ.</p>.ಯುದ್ಧ ನಿಲ್ಲಿಸುವ ಮೋದಿಗೆ ಭಾರತ-ಪಾಕ್ ಪಂದ್ಯ ನಿಲ್ಲಿಸಲಾಗುತ್ತಿಲ್ಲ: ಸಂಜಯ್ ಲೇವಡಿ.ಸೇನೆ ಬದಲು ರಾಷ್ಟ್ರವಿರೋಧಿ ಶಕ್ತಿಯನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ:ಮೋದಿ ಕಿಡಿ. <p>ಕಳೆದ ತಿಂಗಳು ದೆಹಲಿಯಲ್ಲಿ ನಡೆದ ಮನೆ ಪಾರ್ಟಿಯಲ್ಲಿ ನನಗೆ ಮದ್ಯ ಕುಡಿಸಿ, ಸ್ನಾನಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ಈ ಹಿಂದೆ ಆರೋಪಿಸಿದ್ದರು. ಈ ಘಟನೆಯನ್ನು ತನ್ನ ಫೋನ್ನಲ್ಲಿ ಚಿತ್ರೀಕರಿಸಿ ನಂತರ ಫೋನ್ ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆ ಆರೋಪಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.</p><p>ಘಟನೆ ನಡೆದ ಮೂರು ವಾರಗಳ ಬಳಿಕ ಆರೋಪಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇದಕ್ಕಿಂತ ಮುಂಚೆ ಏಕೆ ನೋಟಿಸ್ ನೀಡಲಿಲ್ಲ. ಏಕೆ ವಿಚಾರಣೆ ನಡೆಸಲಿಲ್ಲ. ಕಳೆದು ಹೋಗಿರುವ ಫೋನ್ ಪತ್ತೆ ಹಚ್ಚಲು ಯಾವುದೇ ಪ್ರಾಮಾಣಿಕ ಪ್ರಯತ್ನ ನಡೆದಿಲ್ಲ ಎಂದು ನ್ಯಾಯಾಲಯ ಪ್ರಶ್ನಿಸಿದೆ.</p>.14 ಕೋಟಿ ಸದಸ್ಯರು; ಬಿಜೆಪಿ ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ: ನಡ್ಡಾ.ಗಣೇಶ ವಿಸರ್ಜನೆ ವೇಳೆ ಮೃತಪಟ್ಟವರಿಗೆ ಪರಿಹಾರ ನೀಡಲು ಮೀನಮೇಷ: ಶೋಭಾ ಕಿಡಿ. <p>ಆರೋಪಿಯು ಈ ಹಿಂದೆ ಯಾವುದೇ ಅಪರಾಧದಲ್ಲಿ ಭಾಗಿಯಾಗಿಲ್ಲ. ಆರೋಪಿ ಪರಾರಿಯಾಗುವ ಅವಕಾಶವಿದೆ ಎಂಬ ಹೇಳಿಕೆಗೆ ಉತ್ತರಿಸಿದ ನ್ಯಾಯಾಲಯ ಪ್ರಕರಣ ದಾಖಲಾದ ದಿನವೇ ಆರೋಪಿ ಪರಾರಿಯಾಗಬೇಕಿತ್ತಲ್ಲವೇ?, ಪೊಲೀಸರು ಶಂಕೆ ವ್ಯಕ್ತಪಡಿಸಿದ ಮಾತ್ರಕ್ಕೆ ಜಾಮೀನು ನಿರಾಕರಿಸಲಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.</p><p>ಪ್ರಕರಣ ಸಂಬಂಧ ವರದಿ ಸಲ್ಲಿಸಲು ಹಾಗೂ ಮುಂದಿನ ಪ್ರಕ್ರಿಯೆಗಳಿಗೆ ಪೊಲೀಸರು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ನ್ಯಾಯಾಲಯದ ಗಮನಕ್ಕೆ ತರಲಾದ ಸಂಗತಿಗಳನ್ನು ಪರಿಶೀಲಿಸಿ ಜಾಮೀನು ಅರ್ಜಿಗೆ ಅರ್ಹತೆ ಹೊಂದಿರುವುದರಿಂದ ಜಾಮೀನನ್ನು ಅನುಮತಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.</p>.ಬೆಳಗಾವಿ: ಭಾವೈಕ್ಯ ಮೆರೆದ ಈದ್–ಮಿಲಾದ್; ಮುಸ್ಲಿಮರೊಂದಿಗೆ ಹಿಂದೂಗಳು ಭಾಗಿ.Visual Story: ವಿಭಿನ್ನ ಉಡುಗೆಯಲ್ಲಿ ನಟಿ ರುಕ್ಮಿಣಿ ವಸಂತ್.ದೆಹಲಿ: ಫ್ಲೈಓವರ್ನಿಂದ ರೈಲ್ವೆ ಹಳಿ ಮೇಲೆ ಬಿದ್ದ ಕಾರು, ಚಾಲಕನಿಗೆ ಗಾಯ.ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ₹5 ಕೋಟಿ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>