ತೆಲುಗಿನಲ್ಲಿ ಆಕೆಗೆ ಭದ್ರನೆಲೆ ಒದಗಿಸಿದ ಚಿತ್ರ ‘ಗೀತ ಗೋವಿಂದಂ’. ಇದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ಪರಶುರಾಮ್ ಅವರೇ ‘ನಾಗೇಶ್ವರರಾವ್’ ಚಿತ್ರವನ್ನೂ ನಿರ್ದೇಶಿಸುತ್ತಿದ್ದಾರೆ. ಅವರೇ ಈ ಚಿತ್ರದಲ್ಲಿ ನಟಿಸುವಂತೆ ರಶ್ಮಿಕಾಗೆ ಕೋರಿದ್ದಾರಂತೆ. ಶೀಘ್ರವೇ, ಈ ಚಿತ್ರದ ಶೂಟಿಂಗ್ ಶುರುವಾಗಲಿದೆ. ಆದರೆ, ಇದರಲ್ಲಿ ನಟಿಸುವ ಬಗ್ಗೆ ಇನ್ನೂ ಆಕೆ ಯಾವುದೇ ಒಪ್ಪಿಗೆ ನೀಡಿಲ್ಲವಂತೆ. ಟಾಲಿವುಡ್ನಲ್ಲಿ ರಶ್ಮಿಕಾಗೆ ಗಟ್ಟಿನೆಲೆ ಕಲ್ಪಿಸಿದ್ದು, ಪರಶುರಾಮ್. ಹಾಗಾಗಿಯೇ, ರಶ್ಮಿಕಾ ಸಮ್ಮತಿಸುವ ನಿರೀಕ್ಷೆಯಿದೆ ಎನ್ನುವುದು ಆಕೆಯ ಅಭಿಮಾನಿಗಳ ಲೆಕ್ಕಾಚಾರ.