ನಟಿ ರಶ್ಮಿಕಾ ಮಂದಣ್ಣ ತೆಲುಗಿನ ‘ಸರಿಲೇರು ನೀಕೆವ್ವರು’ ಚಿತ್ರದ ಗೆಲುವಿನ ಖುಷಿಯಲ್ಲಿದ್ದಾರೆ. ಈ ಚಿತ್ರದ ಮೂಲಕ ಅವರು ಮೊದಲ ಬಾರಿಗೆ ‘ಟಾಲಿವುಡ್ ಪ್ರಿನ್ಸ್’ ಮಹೇಶ್ಬಾಬು ಜೊತೆಗೆ ತೆರೆ ಹಂಚಿಕೊಂಡಿದ್ದರು. ವಿಜಯ ದೇವರಕೊಂಡ ಜೊತೆಗೆ ನಟಿಸಿದ್ದ ‘ಡಿಯರ್ ಕಾಮ್ರೇಡ್’ ಚಿತ್ರದ ಸೋಲು ಮತ್ತು ಐಟಿ ದಾಳಿಯಿಂದ ಕೆಂಗೆಟ್ಟಿದ್ದ ರಶ್ಮಿಕಾಗೆ ಈ ಚಿತ್ರದ ಯಶಸ್ಸು ಹೊಸ ಹುಮ್ಮಸ್ಸು ತುಂಬಿರುವುದಂತೂ ಸತ್ಯ. ಜೊತೆಗೆ, ತೆಲುಗಿನಲ್ಲಿ ಮತ್ತಷ್ಟು ಅವಕಾಶಗಳಿಗೆ ಈ ಗೆಲುವು ರತ್ನಗಂಬಳಿ ಹಾಸುವುದರಲ್ಲಿ ಅನುಮಾನವಿಲ್ಲ ಎನ್ನುವುದು ಆಕೆಯ ಅಭಿಮಾನಿಗಳ ಲೆಕ್ಕಾಚಾರ.