<p>ಅರವತ್ತರ ದಶಕದಲ್ಲಿ ಚಿತ್ರರಸಿಕರ ಮನಸೂರೆಗೊಂಡ ಚಿತ್ರ ‘ರತ್ನಮಂಜರಿ’. ಈ ಚಿತ್ರದ ‘ಯಾರು ಯಾರು ನೀ ಯಾರು’ ಹಾಡು ಇಂದಿಗೂ ಜನರ ನಾಲಿಗೆ ಮೇಲೆ ನಲಿದಾಡುತ್ತಿದೆ. ಅಂದಹಾಗೆ ಇದೇ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಇದೇ ಶುಕ್ರವಾರ ಲಗ್ಗೆ ಇಡುತ್ತಿದ್ದಾಳೆ ಆಧುನಿಕ ‘ರತ್ನಮಂಜರಿ’.</p>.<p>ಈ ಕುರಿತು ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಅವಳ ವಿಚಿತ್ರ ನಗುವಿಗೆ ಪ್ರೇಕ್ಷಕರು ಫಿದಾ ಆಗಲಿದ್ದಾರೆ ಎನ್ನುವುದು ಚಿತ್ರತಂಡದ ಅಂಬೋಣ.</p>.<p>ಥ್ರಿಲ್ಲರ್, ಹಾರರ್ ಸಿನಿಮಾ ಇದು. ತೊಂಬತ್ತರ ದಶಕದಲ್ಲಿ ನಡೆದ ನೈಜ ಘಟನೆ ಆಧರಿಸಿ ಈ ಕಥೆ ಹೊಸೆಯಲಾಗಿದೆಯಂತೆ. ‘ಚಿತ್ರದಲ್ಲಿ ಮೂವರು ನಾಯಕಿಯರು ಇದ್ದಾರೆ. ಅದರಲ್ಲಿ ರತ್ನಮಂಜರಿ ಯಾರು ಎನ್ನುವುದನ್ನು ಚಿತ್ರಮಂದಿರದಲ್ಲಿಯೇ ನೋಡಬೇಕು’ ಎಂದ ನಿರ್ದೇಶಕ ಪ್ರಸಿದ್ಧ್ ಕಥೆಯ ಬಗ್ಗೆ ಕುತೂಹಲ ಹೆಚ್ಚಿದರು.</p>.<p>ನಾಯಕ ರಾಜ್ ಚರಣ್ ಅನಿವಾಸಿ ಭಾರತೀಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಛಾಯಾಗ್ರಹಣ ಪ್ರೀತಮ್ ತಗ್ಗಿನಮನೆ ಅವರದ್ದು.ಒಂದು ಹಾಡಿಗೆ ನಟ ಪುನೀತ್ ರಾಜ್ಕುಮಾರ್ ಕಂಠ ದಾನ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರವತ್ತರ ದಶಕದಲ್ಲಿ ಚಿತ್ರರಸಿಕರ ಮನಸೂರೆಗೊಂಡ ಚಿತ್ರ ‘ರತ್ನಮಂಜರಿ’. ಈ ಚಿತ್ರದ ‘ಯಾರು ಯಾರು ನೀ ಯಾರು’ ಹಾಡು ಇಂದಿಗೂ ಜನರ ನಾಲಿಗೆ ಮೇಲೆ ನಲಿದಾಡುತ್ತಿದೆ. ಅಂದಹಾಗೆ ಇದೇ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಇದೇ ಶುಕ್ರವಾರ ಲಗ್ಗೆ ಇಡುತ್ತಿದ್ದಾಳೆ ಆಧುನಿಕ ‘ರತ್ನಮಂಜರಿ’.</p>.<p>ಈ ಕುರಿತು ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಅವಳ ವಿಚಿತ್ರ ನಗುವಿಗೆ ಪ್ರೇಕ್ಷಕರು ಫಿದಾ ಆಗಲಿದ್ದಾರೆ ಎನ್ನುವುದು ಚಿತ್ರತಂಡದ ಅಂಬೋಣ.</p>.<p>ಥ್ರಿಲ್ಲರ್, ಹಾರರ್ ಸಿನಿಮಾ ಇದು. ತೊಂಬತ್ತರ ದಶಕದಲ್ಲಿ ನಡೆದ ನೈಜ ಘಟನೆ ಆಧರಿಸಿ ಈ ಕಥೆ ಹೊಸೆಯಲಾಗಿದೆಯಂತೆ. ‘ಚಿತ್ರದಲ್ಲಿ ಮೂವರು ನಾಯಕಿಯರು ಇದ್ದಾರೆ. ಅದರಲ್ಲಿ ರತ್ನಮಂಜರಿ ಯಾರು ಎನ್ನುವುದನ್ನು ಚಿತ್ರಮಂದಿರದಲ್ಲಿಯೇ ನೋಡಬೇಕು’ ಎಂದ ನಿರ್ದೇಶಕ ಪ್ರಸಿದ್ಧ್ ಕಥೆಯ ಬಗ್ಗೆ ಕುತೂಹಲ ಹೆಚ್ಚಿದರು.</p>.<p>ನಾಯಕ ರಾಜ್ ಚರಣ್ ಅನಿವಾಸಿ ಭಾರತೀಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಛಾಯಾಗ್ರಹಣ ಪ್ರೀತಮ್ ತಗ್ಗಿನಮನೆ ಅವರದ್ದು.ಒಂದು ಹಾಡಿಗೆ ನಟ ಪುನೀತ್ ರಾಜ್ಕುಮಾರ್ ಕಂಠ ದಾನ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>