ಗಿರಿರಾಜ್ ಹೇಳುವಂತೆ, ‘ರವಿಚಂದ್ರನ್ ಅವರು ತಮ್ಮ ವೃತ್ತಿಬದುಕಿನ ಉತ್ತುಂಗಕ್ಕೆ ಏರಿದ್ದಾರೆ. ಹಾಗಾಗಿ ಹೊಸ ರಿಸ್ಕ್ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ಬಾಕ್ಸ್ ಆಫೀಸ್ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನನ್ನ ಈ ದೃಷ್ಟಿಕೋನ ಅವರಿಗೆ ಹಿಡಿಸಿದ ಕಾರಣ ಅವರು ನನ್ನ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ’ ಎಂದರು.