‘ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವೃತ್ತಿಜೀವನದ ಬೆಳ್ಳಿ ಮಹೋತ್ಸವ ಸಂಭ್ರಮಕ್ಕೆ ಬೆಳ್ಳಿ ನಾಣ್ಯ ಬಿಡುಗಡೆ ಮಾಡಲಾಗುತ್ತಿದೆ. ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವಸಂತಗಳನ್ನು ಪೂರೈಸಿದ ನಾಡಿನ ಹೆಮ್ಮೆಯ ಕಲಾವಿದ, ನಿರೂಪಕ, ನಿರ್ದೇಶಕ, ನಿರ್ಮಾಪಕ, ಗಾಯಕ ಸುದೀಪ್. ಈ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ‘ಸುದೀಪ್ ಸಾಂಸ್ಕೃತಿಕ ಪರಿಷತ್ತು’ ತಿಳಿಸಿದೆ.