<p><strong>ಬೆಂಗಳೂರು:</strong> ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸುತ್ತಿರುವ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕಿಡಿಕಾರಿದ್ದಾರೆ. ಇನ್ನು, ಈ ವಿಚಾರ ಸದ್ದು ಮಾಡುತ್ತಿದ್ದಂತೆ ರಕ್ಷಿತಾ ಪ್ರೇಮ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.</p>.<p>ರಕ್ಷಿತಾ ಅವರು, ಯಾರನ್ನು ಉದ್ದೇಶಿಸಿ(ದರ್ಶನ್ ಅಭಿಮಾನಿಗಳು/ರಮ್ಯಾ) ಈ ಪೋಸ್ಟ್ ಹಾಕಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.</p>.<p><strong>ಪೋಸ್ಟ್ನಲ್ಲಿ ಏನಿದೆ?</strong></p><p>ರಕ್ಷಿತಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಎರಡು ಪೋಸ್ಟ್ ಹಂಚಿಕೊಂಡಿದ್ದಾರೆ. ಮೊದಲ ಪೋಸ್ಟ್ನಲ್ಲಿ, 'ನೀವು ಜನರ ಮಾನಸಿಕ ಆರೋಗ್ಯ ನೋಡಲು ಸಾಧ್ಯವಿಲ್ಲ. ದಯವಿಟ್ಟು ದಯೆಯಿಂದಿರಿ' ಎಂದು ಬರೆದುಕೊಂಡಿದ್ದಾರೆ.</p>. <p>ಮತ್ತೊಂದು ಪೋಸ್ಟ್ನಲ್ಲಿ, 'ನಾನು ನಿಜವಾಗಿ ಏನು ವೈರಲ್ ಆಗೋದನ್ನ ನೋಡಲು ಬಯಸುತ್ತಿದ್ದೇನೆ ಗೊತ್ತಾ? 'Basic human decency' (ಮೂಲಭೂತವಾಗಿ ಮನುಷ್ಯನಿಗೆ ಇರಬೇಕಾದ ಸಭ್ಯತೆ)' ಎಂದು ರಕ್ಷಿತಾ ಬರೆದುಕೊಂಡಿದ್ದಾರೆ. </p>.<p>ರಕ್ಷಿತಾ ಅವರ ಈ ಪೋಸ್ಟ್ಗಳು ರಮ್ಯಾ ಅವರನ್ನು ಉದ್ದೇಶಿಸಿ ಬರೆದಿದ್ದೇ ಅಥವಾ ದರ್ಶನ್ ಅಭಿಮಾನಿಗಳ ವರ್ತನೆಗೆ ವ್ಯಕ್ತಪಡಿಸಿದ ಅಸಮಾಧಾನವೇ ಎಂಬುದನ್ನು ನೆಟ್ಟಿಗರು ಅವರದ್ದೇ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.</p>.<p>ರೇಣುಕಸ್ವಾಮಿ ಕುಟುಂಬದ ಪರ ನಿಂತ ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಸಾಮಾಜಿಕ ಮಾದ್ಯಮಗಳಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಭಾನುವಾರ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಂಚಿಕೊಂಡಿದ್ದ ರಮ್ಯಾ, 'ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ' ಎಂದು ಬರೆದುಕೊಂಡಿದ್ದರು.</p> .ದರ್ಶನ್ ಫ್ಯಾನ್ಸ್ ಮೆಸೇಜ್ಗೂ,ರೇಣುಕಸ್ವಾಮಿ ಮೆಸೇಜ್ಗೂ ವ್ಯತ್ಯಾಸ ಇಲ್ಲ: ರಮ್ಯಾ.<h2>ಕಾನೂನು ಕ್ರಮಕ್ಕೆ ಆಗ್ರಹ</h2><p> ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಮಹಿಳೆಯರ ಸ್ಥಾನಮಾನಕ್ಕೆ ಧಕ್ಕೆ ಆಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. </p>.<p>ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆದಿರುವ ಅವರು, ‘ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p> .ಅವಹೇಳನಕಾರಿ ಸಂದೇಶ: ನಟಿ ರಮ್ಯಾ ಬೆಂಬಲಕ್ಕೆ ನಿಂತ ಮಹಿಳಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸುತ್ತಿರುವ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕಿಡಿಕಾರಿದ್ದಾರೆ. ಇನ್ನು, ಈ ವಿಚಾರ ಸದ್ದು ಮಾಡುತ್ತಿದ್ದಂತೆ ರಕ್ಷಿತಾ ಪ್ರೇಮ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.</p>.<p>ರಕ್ಷಿತಾ ಅವರು, ಯಾರನ್ನು ಉದ್ದೇಶಿಸಿ(ದರ್ಶನ್ ಅಭಿಮಾನಿಗಳು/ರಮ್ಯಾ) ಈ ಪೋಸ್ಟ್ ಹಾಕಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.</p>.<p><strong>ಪೋಸ್ಟ್ನಲ್ಲಿ ಏನಿದೆ?</strong></p><p>ರಕ್ಷಿತಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಎರಡು ಪೋಸ್ಟ್ ಹಂಚಿಕೊಂಡಿದ್ದಾರೆ. ಮೊದಲ ಪೋಸ್ಟ್ನಲ್ಲಿ, 'ನೀವು ಜನರ ಮಾನಸಿಕ ಆರೋಗ್ಯ ನೋಡಲು ಸಾಧ್ಯವಿಲ್ಲ. ದಯವಿಟ್ಟು ದಯೆಯಿಂದಿರಿ' ಎಂದು ಬರೆದುಕೊಂಡಿದ್ದಾರೆ.</p>. <p>ಮತ್ತೊಂದು ಪೋಸ್ಟ್ನಲ್ಲಿ, 'ನಾನು ನಿಜವಾಗಿ ಏನು ವೈರಲ್ ಆಗೋದನ್ನ ನೋಡಲು ಬಯಸುತ್ತಿದ್ದೇನೆ ಗೊತ್ತಾ? 'Basic human decency' (ಮೂಲಭೂತವಾಗಿ ಮನುಷ್ಯನಿಗೆ ಇರಬೇಕಾದ ಸಭ್ಯತೆ)' ಎಂದು ರಕ್ಷಿತಾ ಬರೆದುಕೊಂಡಿದ್ದಾರೆ. </p>.<p>ರಕ್ಷಿತಾ ಅವರ ಈ ಪೋಸ್ಟ್ಗಳು ರಮ್ಯಾ ಅವರನ್ನು ಉದ್ದೇಶಿಸಿ ಬರೆದಿದ್ದೇ ಅಥವಾ ದರ್ಶನ್ ಅಭಿಮಾನಿಗಳ ವರ್ತನೆಗೆ ವ್ಯಕ್ತಪಡಿಸಿದ ಅಸಮಾಧಾನವೇ ಎಂಬುದನ್ನು ನೆಟ್ಟಿಗರು ಅವರದ್ದೇ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.</p>.<p>ರೇಣುಕಸ್ವಾಮಿ ಕುಟುಂಬದ ಪರ ನಿಂತ ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಸಾಮಾಜಿಕ ಮಾದ್ಯಮಗಳಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಭಾನುವಾರ ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಂಚಿಕೊಂಡಿದ್ದ ರಮ್ಯಾ, 'ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ' ಎಂದು ಬರೆದುಕೊಂಡಿದ್ದರು.</p> .ದರ್ಶನ್ ಫ್ಯಾನ್ಸ್ ಮೆಸೇಜ್ಗೂ,ರೇಣುಕಸ್ವಾಮಿ ಮೆಸೇಜ್ಗೂ ವ್ಯತ್ಯಾಸ ಇಲ್ಲ: ರಮ್ಯಾ.<h2>ಕಾನೂನು ಕ್ರಮಕ್ಕೆ ಆಗ್ರಹ</h2><p> ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಮಹಿಳೆಯರ ಸ್ಥಾನಮಾನಕ್ಕೆ ಧಕ್ಕೆ ಆಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. </p>.<p>ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಪತ್ರ ಬರೆದಿರುವ ಅವರು, ‘ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p> .ಅವಹೇಳನಕಾರಿ ಸಂದೇಶ: ನಟಿ ರಮ್ಯಾ ಬೆಂಬಲಕ್ಕೆ ನಿಂತ ಮಹಿಳಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>