ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ‘ಜುಲೈ 19ರಿಂದ ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಆಸನಗಳಿಗೆ ಸೀಮಿತಗೊಳಿಸಿ ಚಿತ್ರ ಪ್ರದರ್ಶನ ನಡೆಸಲು ಸರ್ಕಾರ ಅನುಮತಿ ನೀಡಿದೆ. ಇದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಚಿತ್ರೋದ್ಯಮವು ಮತ್ತಷ್ಟು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಅಲ್ಲದೆ, ಶೇ 50ರಷ್ಟು ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿರುವುದರಿಂದ ದೊಡ್ಡ ಹೂಡಿಕೆಯ ಚಿತ್ರಗಳ ನಿರ್ಮಾಪಕರು ಸಹ ಚಿತ್ರ ಬಿಡುಗಡೆಗೆ ಮುಂದಾಗಿರುವುದಿಲ್ಲ’ ಎಂದು ಉಲ್ಲೇಖಿಸಿದೆ.