ಕಾಂತಾರದಿಂದ ದೊಡ್ಡ ಚಿತ್ರಗಳಿಗೆ ಹಾರ್ಟ್ ಅಟ್ಯಾಕ್: ರಿಷಬ್ ನಟನೆಗೆ ಆರ್ಜಿವಿ ಸಲಾಂ

ಬೆಂಗಳೂರು: ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಾಂತಾರ ಸಿನಿಮಾ ನೂರಾರು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಪರ ಭಾಷಾ ನಟ –ನಟಿಯರು ಸೇರಿದಂತೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.
ಓದಿ... ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು: ನಟ ಚೇತನ್ಗೆ ಉಪೇಂದ್ರ ಟಾಂಗ್
ಇದೀಗ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.
‘ದೊಡ್ಡ ಬಜೆಟ್ನ ಸಿನಿಮಾಗಳು ಬಂದರೆ ಮಾತ್ರ ಜನರು ಥಿಯೇಟರ್ಗೆ ಬರುತ್ತಾರೆ ಎಂಬ ಕಟ್ಟುಕತೆಯನ್ನು ರಿಷಬ್ ಶೆಟ್ಟಿ ಸುಳ್ಳು ಮಾಡಿದ್ದಾರೆ. ಮುಂದಿನ ಹಲವು ದಶಕಗಳಿಗೆ ಕಾಂತಾರ ಚಿತ್ರ ಒಂದೊಳ್ಳೆ ಪಾಠ’ ಎಂದು ಆರ್ಜಿವಿ ಟ್ವೀಟ್ ಮಾಡಿದ್ದಾರೆ.
ಓದಿ... ಹಿಂದೂ, ಕ್ರಿಶ್ಚಿಯನ್, ಇಸ್ಲಾಂ ಆಮದು ಮಾಡಿಕೊಂಡ ಧರ್ಮಗಳು: ನಟ ಚೇತನ್ ಮತ್ತೆ ಕಿಡಿ
The @Shetty_Rishab destroys the myth in film people that only mega budget films will pull people into theatres .. #Kantara will be a major lesson for decades to come
— Ram Gopal Varma (@RGVzoomin) October 18, 2022
‘₹300, ₹400, ₹500 ಕೋಟಿ ಬಜೆಟ್ ಸಿನಿಮಾಗಳು ‘ಕಾಂತಾರ’ ಕಲೆಕ್ಷನ್ ಎಂಬ ಹಾರ್ಟ್ ಅಟ್ಯಾಕ್ನಿಂದ ಮೃತಪಟ್ಟಿವೆ. ‘ಡೆವಿಲ್’ ರಿಷಬ್ ಶೆಟ್ಟಿಗೆ ಧನ್ಯವಾದ ಹೇಳಬೇಕು. ದೊಡ್ಡ ಬಜೆಟ್ ಸಿನಿಮಾಗಳು ಕಾಂತಾರದ ಭರ್ಜರಿ ಕಲೆಕ್ಷನ್ನಿಂದ ರಾತ್ರೋರಾತ್ರಿ ಕಾಲ್ಕಿತ್ತಿವೆ. ಕಾಂತಾರ ಎಂಬ ಒಂದೊಳ್ಳೆಯ ಪಾಠವನ್ನು ಹೇಳಿದ ನಿಮಗೆ ಧನ್ಯವಾದ. ಚಿತ್ರರಂಗದ ಎಲ್ಲರೂ ನಿಮಗೆ ಟ್ಯೂಷನ್ ಹಣವನ್ನು ಪಾವತಿಸಬೇಕು’ ಎಂದು ಆರ್ಜಿವಿ ಕೊಂಡಾಡಿದ್ದಾರೆ.
In the film industry now , @Shetty_Rishab is like a Shiva multiplied by Guliga Daiva and the villains are the 300 cr , 400 cr , 500 cr budget film makers who are being killed by a heart attack called #Kantara collections
— Ram Gopal Varma (@RGVzoomin) October 18, 2022
‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.
ಓದಿ... ‘ಕಾಂತಾರ’ ನೋಡಿ ಅನುಷ್ಕಾ ಫಿದಾ: ರಿಷಬ್ ಶೆಟ್ಟಿಯನ್ನು ಕೊಂಡಾಡಿದ ಬಾಹುಬಲಿ ನಟಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.