<p>ಸತೀಶ್ ನೀನಾಸಂ ನಾಯಕನಾಗಿ ನಟಿಸುತ್ತಿರುವ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ನಟ ಸತೀಶ್ ನೀನಾಸಂ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. </p><p>ನಿರ್ದೇಶಕ ವಿನೋದ್ ದೋಂಡಾಳೆ ಅಕಾಲಿಕ ನಿಧನದಿಂದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಅರ್ಧಕ್ಕೆ ನಿಂತಿತ್ತು. ಇದಾದ ಬಳಿಕ ಕಳೆದ ಮಾರ್ಚ್ ತಿಂಗಳಿನಲ್ಲಿ ಈ ಸಿನಿಮಾ ಮತ್ತೆ ಸೆಟ್ಟೇರಿತ್ತು. ಇದೀಗ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೊದಲ ಹಾಡು ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ.</p>.Kannada Movies | ಡಬ್ಬಿಂಗ್ ಮುಗಿಸಿದ ‘ದಿ ರೈಸ್ ಆಫ್ ಅಶೋಕ’.ನಿನಾಸಂ ಸತೀಶ್ಗೆ ನಿರ್ದೇಶನದ ಯೋಚನೆ.<p>ಈ ಕುರಿತು ಸಮಾಜಿಕ ಮಾಧ್ಯಮದಲ್ಲಿ ನಟ ಸತೀಶ್ ನೀನಾಸಂ ಅವರು, ‘ನಮ್ಮ ಚಿತ್ರದ ಮೊದಲ ಹಾಡು ಮಾದಪ್ಪನ ಗೀತೆ ನವೆಂಬರ್ 25ರಂದು ಸಂಜೆ 5:40ಕ್ಕೆ ಬಿಡುಗಡೆಯಾಗುತ್ತಿದೆ. ಇಲ್ಲಿಂದ ಹೊಸ ಯುಗ ಪ್ರಾರಂಭವಾಗುತ್ತದೆ’ ಎಂದು ಬರೆದುಕೊಂಡಿದ್ದಾರೆ. ಇನ್ನು, ಕನ್ನಡ ಸೇರಿದಂತೆ ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ನಟ ನೀನಾಸಂ ಸತೀಶ್ ಅವರಿಗೆ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. </p><p>ನಿರ್ದೇಶಕ ವಿನೋದ್ ದೋಂಡಾಳೆ ಈ ಚಿತ್ರ ಪ್ರಾರಂಭಿಸಿದ್ದರು. ಅವರ ಅಕಾಲಿಕ ಮರಣದಿಂದ ಮನು ಶೆಡ್ಗಾರ್ ನಿರ್ದೇಶಕನಾಗಿ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸತೀಶ್ ನೀನಾಸಂ ನಾಯಕನಾಗಿ ನಟಿಸುತ್ತಿರುವ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ನಟ ಸತೀಶ್ ನೀನಾಸಂ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. </p><p>ನಿರ್ದೇಶಕ ವಿನೋದ್ ದೋಂಡಾಳೆ ಅಕಾಲಿಕ ನಿಧನದಿಂದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಅರ್ಧಕ್ಕೆ ನಿಂತಿತ್ತು. ಇದಾದ ಬಳಿಕ ಕಳೆದ ಮಾರ್ಚ್ ತಿಂಗಳಿನಲ್ಲಿ ಈ ಸಿನಿಮಾ ಮತ್ತೆ ಸೆಟ್ಟೇರಿತ್ತು. ಇದೀಗ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಮೊದಲ ಹಾಡು ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ.</p>.Kannada Movies | ಡಬ್ಬಿಂಗ್ ಮುಗಿಸಿದ ‘ದಿ ರೈಸ್ ಆಫ್ ಅಶೋಕ’.ನಿನಾಸಂ ಸತೀಶ್ಗೆ ನಿರ್ದೇಶನದ ಯೋಚನೆ.<p>ಈ ಕುರಿತು ಸಮಾಜಿಕ ಮಾಧ್ಯಮದಲ್ಲಿ ನಟ ಸತೀಶ್ ನೀನಾಸಂ ಅವರು, ‘ನಮ್ಮ ಚಿತ್ರದ ಮೊದಲ ಹಾಡು ಮಾದಪ್ಪನ ಗೀತೆ ನವೆಂಬರ್ 25ರಂದು ಸಂಜೆ 5:40ಕ್ಕೆ ಬಿಡುಗಡೆಯಾಗುತ್ತಿದೆ. ಇಲ್ಲಿಂದ ಹೊಸ ಯುಗ ಪ್ರಾರಂಭವಾಗುತ್ತದೆ’ ಎಂದು ಬರೆದುಕೊಂಡಿದ್ದಾರೆ. ಇನ್ನು, ಕನ್ನಡ ಸೇರಿದಂತೆ ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ನಟ ನೀನಾಸಂ ಸತೀಶ್ ಅವರಿಗೆ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. </p><p>ನಿರ್ದೇಶಕ ವಿನೋದ್ ದೋಂಡಾಳೆ ಈ ಚಿತ್ರ ಪ್ರಾರಂಭಿಸಿದ್ದರು. ಅವರ ಅಕಾಲಿಕ ಮರಣದಿಂದ ಮನು ಶೆಡ್ಗಾರ್ ನಿರ್ದೇಶಕನಾಗಿ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>