ರಿಷಬ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಕಾಂತಾರ–ಒಂದು ದಂತಕಥೆ’ಯ ಮೊದಲ ಅಧ್ಯಾಯದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗಿದೆ. ಕಾಂತಾರ ಚಿತ್ರದ ಪ್ರೀಕ್ವೆಲ್ ಚಿತ್ರೀಕರಣಕ್ಕಾಗಿ ರಿಷಬ್ ಊರಾದ ಕೆರಾಡಿಯಲ್ಲಿ ಬೃಹತ್ ಸೆಟ್ಗಳನ್ನು ನಿರ್ಮಿಸಲಾಗಿದೆ. ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರ ಹೊತ್ತ ಈ ಚಿತ್ರದ ಶೂಟಿಂಗ್ ಕೊಡಚಾದ್ರಿ ಬೆಟ್ಟದ ಸುತ್ತಮುತ್ತಲೂ ನಡೆಯಲಿದೆ. ಹೀಗಾಗಿ ರಿಷಬ್ ತಮ್ಮ ಊರಿನಲ್ಲೇ ಬೀಡುಬಿಟ್ಟಿದ್ದಾರೆ. ಕೊಲ್ಲೂರು ದೇವಸ್ಥಾನ ಕೆರಾಡಿಗೆ ಸಮೀಪದಲ್ಲೇ ಇದ್ದು, ಇದೇ ಸಂದರ್ಭದಲ್ಲಿ ಮೋಹನ್ಲಾಲ್ ಅವರನ್ನು ಭೇಟಿಯಾಗಿದ್ದಾರೆ.