<p><strong>ಬೆಂಗಳೂರು:</strong> ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಹೀಗೆಂದು ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.</p>.<p>ಭಾಷಾ ಸೂಕ್ಷ್ಮ ಪ್ರದೇಶವಾಗಿರುವ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕೋವಿಡ್ ನಿಯಮಗಳಿಗೆ ಒಳಪಟ್ಟು ಆಚರಣೆ ಮಾಡಬೇಕಾಗಿ ಇತ್ತೀಚಿನ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.</p>.<p>ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಅವಕಾಶ ಕೋರಿ ಈಗಾಗಲೇ ಕನ್ನಡ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿವೆ.</p>.<p>ಹೀಗಿರುವಾಗಲೇ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕನ್ನಡ ರಾಜ್ಯೋತ್ಸವದ ಸಂಭ್ರಮದ ಆಚರಣೆಗೆ ಬೆಂಬಲ ನೀಡಿದ್ದಾರೆ.</p>.<p>‘ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಆಚರಣೆ, ಇತಿಹಾಸಗಳು ಭಿನ್ನವಾದರೂ ನಾಡಿಗೆ ದಸರಾ ಜತೆಗಿನ ಭಾವನಾತ್ಮಕ ಸಂಬಂಧವೇ ರಾಜ್ಯೋತ್ಸವದೊಂದಿಗೂ ಇದೆ. ಮೈಸೂರಿನ ಸಂಭ್ರಮವೇ ಬೆಳಗಾವಿಯಲ್ಲೂ ಮುಂದುವರೆಯಲು ಮಾನ್ಯ ಮುಖ್ಯಮಂತ್ರಿಗಳು ಅವಕಾಶ ನೀಡಬೇಕಾಗಿ ವಿನಂತಿ,’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಇದರ ಜೊತೆಗೆ, <strong>#ನಮ್ಮ_ರಾಜ್ಯೋತ್ಸವ_ನಮ್ಮ_ಹಬ್ಬ</strong> ಎಂಬ ಹ್ಯಾಷ್ ಟ್ಯಾಗ್ ಅನ್ನೂ ಅವರು ತಮ್ಮ ಟ್ವೀಟ್ನಲ್ಲಿ ಸೇರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಹೀಗೆಂದು ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.</p>.<p>ಭಾಷಾ ಸೂಕ್ಷ್ಮ ಪ್ರದೇಶವಾಗಿರುವ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕೋವಿಡ್ ನಿಯಮಗಳಿಗೆ ಒಳಪಟ್ಟು ಆಚರಣೆ ಮಾಡಬೇಕಾಗಿ ಇತ್ತೀಚಿನ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.</p>.<p>ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಅವಕಾಶ ಕೋರಿ ಈಗಾಗಲೇ ಕನ್ನಡ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿವೆ.</p>.<p>ಹೀಗಿರುವಾಗಲೇ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕನ್ನಡ ರಾಜ್ಯೋತ್ಸವದ ಸಂಭ್ರಮದ ಆಚರಣೆಗೆ ಬೆಂಬಲ ನೀಡಿದ್ದಾರೆ.</p>.<p>‘ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಆಚರಣೆ, ಇತಿಹಾಸಗಳು ಭಿನ್ನವಾದರೂ ನಾಡಿಗೆ ದಸರಾ ಜತೆಗಿನ ಭಾವನಾತ್ಮಕ ಸಂಬಂಧವೇ ರಾಜ್ಯೋತ್ಸವದೊಂದಿಗೂ ಇದೆ. ಮೈಸೂರಿನ ಸಂಭ್ರಮವೇ ಬೆಳಗಾವಿಯಲ್ಲೂ ಮುಂದುವರೆಯಲು ಮಾನ್ಯ ಮುಖ್ಯಮಂತ್ರಿಗಳು ಅವಕಾಶ ನೀಡಬೇಕಾಗಿ ವಿನಂತಿ,’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>ಇದರ ಜೊತೆಗೆ, <strong>#ನಮ್ಮ_ರಾಜ್ಯೋತ್ಸವ_ನಮ್ಮ_ಹಬ್ಬ</strong> ಎಂಬ ಹ್ಯಾಷ್ ಟ್ಯಾಗ್ ಅನ್ನೂ ಅವರು ತಮ್ಮ ಟ್ವೀಟ್ನಲ್ಲಿ ಸೇರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>