<p>ರಿಷಬ್ ಶೆಟ್ಟಿ ನಿರ್ಮಿಸಿ, ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಆಗಸ್ಟ್ 30ರಂದು ತೆರೆಗೆ ಬರಲಿದೆ. ಚಿತ್ರದ ‘ಎಂಥಾ ಚಂದಾನೇ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.</p>.<p>ಭರತ್ ರಾಜ್ ನಿರ್ದೇಶನವಿದೆ. ಈ ಗೀತೆಗೆ ಕೆ.ಕಲ್ಯಾಣ್ ಸಾಹಿತ್ಯವಿದ್ದು, ವಿಷ್ಣು ವಿಜಯ್ ಸಂಗೀತ ನಿರ್ದೇಶನವಿದೆ. ‘ಭರತ್ ಈ ಹಿಂದೆ ನನ್ನ ‘ಹೀರೋ’ ಚಿತ್ರ ನಿರ್ದೆಶಿಸಿದ್ದರು. ಅವರು ಈ ಚಿತ್ರದ ಕಥೆ ಹೇಳಿದಾಗ ಮನಸ್ಸಿಗೆ ಹತ್ತಿರವಾಯಿತು. ಪೊಲೀಸ್ ಕುಟುಂಬ ಹಾಗೂ ಅವರ ಭಾವನೆಗಳ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ’ ಎಂದರು ನಿರ್ಮಾಪಕ ರಿಷಬ್ ಶೆಟ್ಟಿ.</p>.<p>ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪೇದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತೇಜು ಬೆಳವಾಡಿ ಸತ್ಯವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿಗಂತ್ ಮಂಚಾಲೆ ಕೂಡ ನಟಿಸಿದ್ದಾರೆ. ಭದ್ರಾವತಿ ಹಾಗೂ ಸುತ್ತಮುತ್ತಲ್ಲಿನ ಸ್ಥಳದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ.</p>.<p>‘ಚೀನಾ ದೇಶದಲ್ಲಿ ಬುದ್ಧ್ಯ ಎಂಬುವವನು ಒಂದು ಚೀಲದಲ್ಲಿ ಮಕ್ಕಳಿಗೆ ಬೇಕಾದ ಸಿಹಿ ಪದಾರ್ಥಗಳನ್ನು ತುಂಬಿಕೊಂಡು, ಮಕ್ಕಳನ್ನು ಹಾಗೂ ಎಲ್ಲರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ. ನಮ್ಮ ಚಿತ್ರದ ನಾಯಕ ಗೋವರ್ಧನ ಪಾತ್ರವು ಕೂಡ ಇದೇ ರೀತಿ. ಅದಕ್ಕಾಗಿ ಈ ಶೀರ್ಷಿಕೆ ಇಟ್ಟಿದ್ದೇವೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದರು.</p>.<p>ಕೆ.ಎಸ್ ಚಂದ್ರಶೇಖರ್ ಅವರ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಿಷಬ್ ಶೆಟ್ಟಿ ನಿರ್ಮಿಸಿ, ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಆಗಸ್ಟ್ 30ರಂದು ತೆರೆಗೆ ಬರಲಿದೆ. ಚಿತ್ರದ ‘ಎಂಥಾ ಚಂದಾನೇ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.</p>.<p>ಭರತ್ ರಾಜ್ ನಿರ್ದೇಶನವಿದೆ. ಈ ಗೀತೆಗೆ ಕೆ.ಕಲ್ಯಾಣ್ ಸಾಹಿತ್ಯವಿದ್ದು, ವಿಷ್ಣು ವಿಜಯ್ ಸಂಗೀತ ನಿರ್ದೇಶನವಿದೆ. ‘ಭರತ್ ಈ ಹಿಂದೆ ನನ್ನ ‘ಹೀರೋ’ ಚಿತ್ರ ನಿರ್ದೆಶಿಸಿದ್ದರು. ಅವರು ಈ ಚಿತ್ರದ ಕಥೆ ಹೇಳಿದಾಗ ಮನಸ್ಸಿಗೆ ಹತ್ತಿರವಾಯಿತು. ಪೊಲೀಸ್ ಕುಟುಂಬ ಹಾಗೂ ಅವರ ಭಾವನೆಗಳ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ’ ಎಂದರು ನಿರ್ಮಾಪಕ ರಿಷಬ್ ಶೆಟ್ಟಿ.</p>.<p>ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪೇದೆ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತೇಜು ಬೆಳವಾಡಿ ಸತ್ಯವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿಗಂತ್ ಮಂಚಾಲೆ ಕೂಡ ನಟಿಸಿದ್ದಾರೆ. ಭದ್ರಾವತಿ ಹಾಗೂ ಸುತ್ತಮುತ್ತಲ್ಲಿನ ಸ್ಥಳದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ.</p>.<p>‘ಚೀನಾ ದೇಶದಲ್ಲಿ ಬುದ್ಧ್ಯ ಎಂಬುವವನು ಒಂದು ಚೀಲದಲ್ಲಿ ಮಕ್ಕಳಿಗೆ ಬೇಕಾದ ಸಿಹಿ ಪದಾರ್ಥಗಳನ್ನು ತುಂಬಿಕೊಂಡು, ಮಕ್ಕಳನ್ನು ಹಾಗೂ ಎಲ್ಲರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ. ನಮ್ಮ ಚಿತ್ರದ ನಾಯಕ ಗೋವರ್ಧನ ಪಾತ್ರವು ಕೂಡ ಇದೇ ರೀತಿ. ಅದಕ್ಕಾಗಿ ಈ ಶೀರ್ಷಿಕೆ ಇಟ್ಟಿದ್ದೇವೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದರು.</p>.<p>ಕೆ.ಎಸ್ ಚಂದ್ರಶೇಖರ್ ಅವರ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>