<p><strong>ಮುಂಬೈ:</strong> ಬಾಲಿವುಡ್ ಜೋಡಿಗಳಾದ ರಿತೇಶ್ ದೇಶ್ಮುಖ್ ಹಾಗೂ ಪತ್ನಿ ಜೆನಿಲಿಯಾ ಅವರನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. </p><p>ರಿತೇಶ್ ಹಾಗೂ ಜೆನಿಲಿಯಾ ಅವರು ಮುಂದಿನ ಐದು ವರ್ಷಗಳ ಕಾಲ ಈ ಸಂಸ್ಥೆಯ ರಾಯಭಾರಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಅವರು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಸಂಚಾರಿ ನಿಯಮಗಳ 'ಪಾಲನೆ ಮತ್ತು ಅಪಘಾತ ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸುವುದು', 'ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಅಭಿಯಾನಗಳಲ್ಲಿ' ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. </p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಏಕನಾಥ್ ಶಿಂದೆ, ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ರಿತೇಶ್ ದೇಶ್ಮುಖ್ ದಂಪತಿ ಸಹಿ ಹಾಕಿದ್ದಾರೆ. </p><p>2023ರಲ್ಲಿ ಖ್ಯಾತ ಮರಾಠಿ ನಟ ಮಕರಂದ್ ಅನಾಸ್ಪುರೆ ಅವರನ್ನು ಎಂ.ಎಸ್.ಆರ್.ಟಿ.ಸಿ ರಾಯಭಾರಿಯಾಗಿ ನೇಮಿಸಿತ್ತು. ರಸ್ತೆಗೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಅಷ್ಟಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಈಗ ರಿತೇಶ್ ದೇಶ್ಮುಖ್ ಜೋಡಿಯನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಾಲಿವುಡ್ ಜೋಡಿಗಳಾದ ರಿತೇಶ್ ದೇಶ್ಮುಖ್ ಹಾಗೂ ಪತ್ನಿ ಜೆನಿಲಿಯಾ ಅವರನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. </p><p>ರಿತೇಶ್ ಹಾಗೂ ಜೆನಿಲಿಯಾ ಅವರು ಮುಂದಿನ ಐದು ವರ್ಷಗಳ ಕಾಲ ಈ ಸಂಸ್ಥೆಯ ರಾಯಭಾರಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಈ ಅವಧಿಯಲ್ಲಿ ಅವರು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಸಂಚಾರಿ ನಿಯಮಗಳ 'ಪಾಲನೆ ಮತ್ತು ಅಪಘಾತ ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸುವುದು', 'ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಅಭಿಯಾನಗಳಲ್ಲಿ' ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. </p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಏಕನಾಥ್ ಶಿಂದೆ, ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ರಿತೇಶ್ ದೇಶ್ಮುಖ್ ದಂಪತಿ ಸಹಿ ಹಾಕಿದ್ದಾರೆ. </p><p>2023ರಲ್ಲಿ ಖ್ಯಾತ ಮರಾಠಿ ನಟ ಮಕರಂದ್ ಅನಾಸ್ಪುರೆ ಅವರನ್ನು ಎಂ.ಎಸ್.ಆರ್.ಟಿ.ಸಿ ರಾಯಭಾರಿಯಾಗಿ ನೇಮಿಸಿತ್ತು. ರಸ್ತೆಗೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಅಷ್ಟಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಈಗ ರಿತೇಶ್ ದೇಶ್ಮುಖ್ ಜೋಡಿಯನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>