<p>ಕೊರೊನಾ ಸೋಂಕಿನ ಬಿಸಿ ಮಾರ್ಚ್ ಅಂತ್ಯದಲ್ಲಿ ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದ ಸ್ಟಾರ್ ನಟರ ಹಲವು ಚಿತ್ರಗಳಿಗೆ ತಟ್ಟಿದೆ.</p>.<p>ಗುಜರಾತ್ನ ಕಛ್ ಪ್ರದೇಶದಲ್ಲಿ ಕೊನೆಯ ಹಾಡಿನ ಚಿತ್ರೀಕರಣ ಪೂರ್ಣಗೊಳಿಸಿಕೊಂಡು ತರುಣ್ ಸುಧೀರ್ ನಿರ್ದೇಶನದ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರತಂಡ ಬೆಂಗಳೂರಿಗೆ ಹಿಂದಿರುಗಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿರುವ ಈ ಚಿತ್ರ ಏಪ್ರಿಲ್ 9ರಂದು ತೆರೆ ಕಾಣಬೇಕಿತ್ತು. ಕೊರೊನಾ ಸೋಂಕಿನ ಭೀತಿಯಿಂದಾಗಿ ಮೇ 1ರಂದು ಚಿತ್ರ ಬಿಡುಗಡೆಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಿರ್ಧರಿಸಿದ್ದಾರೆ.</p>.<p>‘ದುನಿಯಾ’ ವಿಜಯ್ ನಿರ್ದೇಶನದ ‘ಸಲಗ’ ಶೂಟಿಂಗ್ ಪೂರ್ಣಗೊಂಡಿದೆ. ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಇದರ ಬಿಡುಗಡೆಯೂ ಮುಂದೂಡಿಕೆಯಾಗಿದೆ.</p>.<p>ಬೇಸಿಗೆ ರಜೆ ವೇಳೆಗೆ ಸಂತೋಷ್ ಆನಂದ್ರಾಮ್ ನಿರ್ದೇಶನದ ಪುನೀತ್ ರಾಜ್ಕುಮಾರ್ ನಟನೆಯ ‘ಯುವರತ್ನ’ ಹಾಗೂ ತರುಣ್ ಸುಧೀರ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರಗಳನ್ನು ತೆರೆಗೆ ತರಲು ಆಯಾ ಚಿತ್ರದ ನಿರ್ಮಾಪಕರು ನಿರ್ಧರಿಸಿದ್ದರು. ಆದರೆ, ಕೊರೊನಾ ಸೋಂಕಿನ ಭೀತಿಯಿಂದ ಈ ಸಿನಿಮಾಗಳ ಹಾಡುಗಳ ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ, ಈ ಸಿನಿಮಾಗಳ ಬಿಡುಗಡೆ ಎರಡು– ಮೂರು ತಿಂಗಳು ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊರೊನಾ ಸೋಂಕಿನ ಬಿಸಿ ಮಾರ್ಚ್ ಅಂತ್ಯದಲ್ಲಿ ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದ ಸ್ಟಾರ್ ನಟರ ಹಲವು ಚಿತ್ರಗಳಿಗೆ ತಟ್ಟಿದೆ.</p>.<p>ಗುಜರಾತ್ನ ಕಛ್ ಪ್ರದೇಶದಲ್ಲಿ ಕೊನೆಯ ಹಾಡಿನ ಚಿತ್ರೀಕರಣ ಪೂರ್ಣಗೊಳಿಸಿಕೊಂಡು ತರುಣ್ ಸುಧೀರ್ ನಿರ್ದೇಶನದ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರತಂಡ ಬೆಂಗಳೂರಿಗೆ ಹಿಂದಿರುಗಿತ್ತು. ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿರುವ ಈ ಚಿತ್ರ ಏಪ್ರಿಲ್ 9ರಂದು ತೆರೆ ಕಾಣಬೇಕಿತ್ತು. ಕೊರೊನಾ ಸೋಂಕಿನ ಭೀತಿಯಿಂದಾಗಿ ಮೇ 1ರಂದು ಚಿತ್ರ ಬಿಡುಗಡೆಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಿರ್ಧರಿಸಿದ್ದಾರೆ.</p>.<p>‘ದುನಿಯಾ’ ವಿಜಯ್ ನಿರ್ದೇಶನದ ‘ಸಲಗ’ ಶೂಟಿಂಗ್ ಪೂರ್ಣಗೊಂಡಿದೆ. ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಇದರ ಬಿಡುಗಡೆಯೂ ಮುಂದೂಡಿಕೆಯಾಗಿದೆ.</p>.<p>ಬೇಸಿಗೆ ರಜೆ ವೇಳೆಗೆ ಸಂತೋಷ್ ಆನಂದ್ರಾಮ್ ನಿರ್ದೇಶನದ ಪುನೀತ್ ರಾಜ್ಕುಮಾರ್ ನಟನೆಯ ‘ಯುವರತ್ನ’ ಹಾಗೂ ತರುಣ್ ಸುಧೀರ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರಗಳನ್ನು ತೆರೆಗೆ ತರಲು ಆಯಾ ಚಿತ್ರದ ನಿರ್ಮಾಪಕರು ನಿರ್ಧರಿಸಿದ್ದರು. ಆದರೆ, ಕೊರೊನಾ ಸೋಂಕಿನ ಭೀತಿಯಿಂದ ಈ ಸಿನಿಮಾಗಳ ಹಾಡುಗಳ ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ, ಈ ಸಿನಿಮಾಗಳ ಬಿಡುಗಡೆ ಎರಡು– ಮೂರು ತಿಂಗಳು ಮುಂದಕ್ಕೆ ಹೋದರೂ ಅಚ್ಚರಿಯಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>