ಅರಮಾನ್ ಹಾಗೂ ಅಭಿಷೇಕ್ ರಫಸ್ ಸಂಗೀತ ನಿರ್ದೇಶನ, ಸಾಮ್ರಾಟ್ ಛಾಯಾಗ್ರಹಣ, ವೆಂಕಿ ಯು.ಡಿ.ವಿ ಸಂಕಲನ ಹಾಗೂ ಚಂದ್ರು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಡಾ.ವಿ.ನಾಗೇಂದ್ರ ಪ್ರಸಾದ್, ಸಿಂಪಲ್ ಸುನಿ ಹಾಗೂ ಕಿನಾಲ್ ರಾಜ್ ಬರೆದಿದ್ದಾರೆ. ಎಸ್.ಎಸ್.ರವಿಗೌಡ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯರು ದಿವ್ಯಾ ಸುರೇಶ್ ಹಾಗೂ ಹೀರ್ಕೌರ್. ಅಮಿತ್, ಕೆಂಪೇಗೌಡ, ಅರುಣಾ ಬಾಲರಾಜ್, ಶ್ರೀನಾಥ್ ವಸಿಷ್ಠ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.