<p>ನಟ ವಿಜಯ್ ದೇವರಕೊಂಡ ನಾಯಕನಾಗಿ ನಟಿಸಲಿರುವ ಹೊಸ ಸಿನಿಮಾದ ಶೀರ್ಷಿಕೆ ಇತ್ತೀಚೆಗೆ ಅನಾವರಣಗೊಂಡಿತು. </p>.<p>ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ನ ಬಹುನಿರೀಕ್ಷಿತ ಚಿತ್ರ ಇದಾಗಿದ್ದು, ಚಿತ್ರಕ್ಕೆ ‘ರೌಡಿ ಜನಾರ್ದನ’ ಎಂಬ ಹೆಸರು ಇಡಲಾಗಿದೆ. ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ನಿರ್ಮಾಣದ ಈ ಚಿತ್ರವನ್ನು ‘ರಾಜಾ ವಾರು ರಾಣಿ ಗಾರು’ ಖ್ಯಾತಿಯ ನಿರ್ದೇಶಕ ರವಿ ಕಿರಣ್ ಕೋಲಾ ನಿರ್ದೇಶಿಸುತ್ತಿದ್ದಾರೆ. ರಕ್ತಸಿಕ್ತವಾದ ಹಾಗೂ ರಾ ಆ್ಯಕ್ಷನ್ನಲ್ಲಿ ಕಾಣಿಸಿಕೊಂಡಿರುವ ವಿಜಯ್ ಪಾತ್ರದ ಲುಕ್ ಕುತೂಹಲವನ್ನು ಹೆಚ್ಚಿಸಿದೆ. ವಿಜಯ್ ದೇವರಕೊಂಡ ಈ ಹಿಂದೆಂದೂ ಕಾಣದ ಮಾಸ್ ಅವತಾರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದಿದೆ ಚಿತ್ರತಂಡ. </p>.<p>1980ರ ಕಾಲಘಟ್ಟದ ಪೂರ್ವ ಗೋದಾವರಿ ಜಿಲ್ಲೆಯ ಹಿನ್ನೆಲೆಯಲ್ಲಿ ಈ ಸಿನಿಮಾದ ಕಥೆ ಸಾಗಲಿದ್ದು, ವಿಜಯ್ ಈ ಚಿತ್ರಕ್ಕಾಗಿ ವಿಶೇಷವಾಗಿ ಗೋದಾವರಿ ಭಾಷಾಸೊಗಡು ಕಲಿತಿದ್ದಾರೆ. ಚಿತ್ರಕ್ಕೆ ಆನೆಂಡ್ ಸಿ. ಚಂದ್ರನ್ ಛಾಯಾಚಿತ್ರಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಮತ್ತು ಸುಪ್ರೀಂ ಸುಂದರ್ ಸಾಹಸ ನಿರ್ದೇಶನವಿದೆ. ಸಿನಿಮಾ 2026ರ ಡಿಸೆಂಬರ್ನಲ್ಲಿ ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟ ವಿಜಯ್ ದೇವರಕೊಂಡ ನಾಯಕನಾಗಿ ನಟಿಸಲಿರುವ ಹೊಸ ಸಿನಿಮಾದ ಶೀರ್ಷಿಕೆ ಇತ್ತೀಚೆಗೆ ಅನಾವರಣಗೊಂಡಿತು. </p>.<p>ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ನ ಬಹುನಿರೀಕ್ಷಿತ ಚಿತ್ರ ಇದಾಗಿದ್ದು, ಚಿತ್ರಕ್ಕೆ ‘ರೌಡಿ ಜನಾರ್ದನ’ ಎಂಬ ಹೆಸರು ಇಡಲಾಗಿದೆ. ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ನಿರ್ಮಾಣದ ಈ ಚಿತ್ರವನ್ನು ‘ರಾಜಾ ವಾರು ರಾಣಿ ಗಾರು’ ಖ್ಯಾತಿಯ ನಿರ್ದೇಶಕ ರವಿ ಕಿರಣ್ ಕೋಲಾ ನಿರ್ದೇಶಿಸುತ್ತಿದ್ದಾರೆ. ರಕ್ತಸಿಕ್ತವಾದ ಹಾಗೂ ರಾ ಆ್ಯಕ್ಷನ್ನಲ್ಲಿ ಕಾಣಿಸಿಕೊಂಡಿರುವ ವಿಜಯ್ ಪಾತ್ರದ ಲುಕ್ ಕುತೂಹಲವನ್ನು ಹೆಚ್ಚಿಸಿದೆ. ವಿಜಯ್ ದೇವರಕೊಂಡ ಈ ಹಿಂದೆಂದೂ ಕಾಣದ ಮಾಸ್ ಅವತಾರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದಿದೆ ಚಿತ್ರತಂಡ. </p>.<p>1980ರ ಕಾಲಘಟ್ಟದ ಪೂರ್ವ ಗೋದಾವರಿ ಜಿಲ್ಲೆಯ ಹಿನ್ನೆಲೆಯಲ್ಲಿ ಈ ಸಿನಿಮಾದ ಕಥೆ ಸಾಗಲಿದ್ದು, ವಿಜಯ್ ಈ ಚಿತ್ರಕ್ಕಾಗಿ ವಿಶೇಷವಾಗಿ ಗೋದಾವರಿ ಭಾಷಾಸೊಗಡು ಕಲಿತಿದ್ದಾರೆ. ಚಿತ್ರಕ್ಕೆ ಆನೆಂಡ್ ಸಿ. ಚಂದ್ರನ್ ಛಾಯಾಚಿತ್ರಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಮತ್ತು ಸುಪ್ರೀಂ ಸುಂದರ್ ಸಾಹಸ ನಿರ್ದೇಶನವಿದೆ. ಸಿನಿಮಾ 2026ರ ಡಿಸೆಂಬರ್ನಲ್ಲಿ ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>