ಸ್ವಾತಂತ್ರ್ಯ ಪೂರ್ವ 1920ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದ್ದು, ಮಾರ್ಚ್ 25ರಂದು ತೆರೆಕಾಣುತ್ತಿದೆ. ಬಿಡುಗಡೆಪೂರ್ವ ಕಾರ್ಯಕ್ರಮದಲ್ಲಿ ನಟರಾದ ಜ್ಯೂನಿಯರ್ ಎನ್ಟಿಆರ್, ರಾಮ್ಚರಣ್ ತೇಜ, ಅಜಯ್ ದೇವ್ಗನ್, ಆಲಿಯಾ ಭಟ್ ಸೇರಿದಂತೆ ಚಿತ್ರದ ಎಲ್ಲ ಕಲಾವಿದರು, ಕನ್ನಡ ಮತ್ತು ತೆಲುಗು ಚಿತ್ರರಂಗದ ಪ್ರಮುಖ ತಾರೆಯರೂ ಭಾಗವಹಿಸಲಿದ್ದಾರೆ.