<p><strong>ಬೆಂಗಳೂರು</strong>: ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ಆರ್ಆರ್ಆರ್’ ಸಿನಿಮಾ ಇದೇ ಮಾರ್ಚ್ 25 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.</p>.<p>ಈ ಹಿನ್ನೆಲೆಯಲ್ಲಿ ಇಂದು ಸಂಜೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಆರ್ಆರ್ಆರ್ ಬಿಡುಗಡೆ ಪೂರ್ವ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ದೇವನಹಳ್ಳಿ ಬಳಿ ಖಾಸಗಿ ರೆಸಾರ್ಟ್ ಒಂದರಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಿತ್ರತಂಡ,ಆರ್ಆರ್ಆರ್ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿತು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ರಾಜಮೌಳಿ ಅವರು ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ಚನ್ನಮ್ಮ ಅವರನ್ನು ಸ್ಮರಿಸಿಕೊಂಡರು.</p>.<p>‘ನಾನು ಹುಟ್ಟಿದ್ದು ಕರ್ನಾಟಕದಲ್ಲಿ, ಬೆಳೆದಿದ್ದು ಆಂಧ್ರಪ್ರದೇಶದಲ್ಲಿ, ವೃತ್ತಿ ಜೀವನ ಪ್ರಾರಂಭಿಸಿದ್ದು ತಮಿಳುನಾಡಿನಿಂದ. ಇವಾಗ ಇರುವುದು ತೆಲಂಗಾಣದಲ್ಲಿ. ಪ್ರತಿಯೊಂದು ಊರಿಗೆ ಅದರದ್ದೇಯಾದ ಮಹತ್ವವಿದೆ. ನಾನು ಎಲ್ಲವನ್ನೂ ಪ್ರೀತಿಸುತ್ತೇನೆ. ಆದರೆ, ಒಂದಕ್ಕೆ ಅಂಟಿಕೊಂಡಿರಲು ಇಷ್ಟಪಡುವುದಿಲ್ಲ’ ಎಂದರು.</p>.<p>‘ಆರ್ಆರ್ಆರ್ ಸಿನಿಮಾದಲ್ಲಿ ರಾಣಿ ಚನ್ನಮ್ಮಳ ಪ್ರಸ್ತಾಪವಿದೆ. ಚನ್ನಮ್ಮಳ ಬಗ್ಗೆ ನಾನು ನನ್ನ ಬಾಲ್ಯಜೀವನದಲ್ಲಿ ಓದಿ ತಿಳಿದುಕೊಂಡಿದ್ದೆ. ಅವರು ನಮಗೆ ಅದ್ಭುತ ಸ್ಪೂರ್ತಿ’ ಎಂದರು.</p>.<p>ಆರ್ಆರ್ಆರ್ ಸಿನಿಮಾದ ಮತ್ತೊಂದು ಟ್ರೈಲರ್ ಬಿಡುಗಡೆಯಾಗುವುದಿಲ್ಲ. ನೇರವಾಗಿ ಸಿನಿಮಾ ಬಿಡುಗಡೆ ಮಾಡುತ್ತೇವೆ. ಇನ್ಮುಂದೆ ಅಭಿಮಾನಿಗಳನ್ನು ಹೆಚ್ಚು ಕಾಯಿಸುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿನಟ ಜೂನಿಯರ್ ಎನ್ಟಿಆರ್, ರಾಮ್ಚರಣ್, ವೆಂಕಟರಾಜು ಇದ್ದರು.</p>.<p><a href="https://www.prajavani.net/entertainment/cinema/rrr-movie-team-press-meet-live-in-bengaluru-920750.html" itemprop="url">Prajavani Facebook Live: ಆರ್.ಆರ್.ಆರ್ ಚಿತ್ರತಂಡದ ಸುದ್ದಿಗೋಷ್ಠಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ಆರ್ಆರ್ಆರ್’ ಸಿನಿಮಾ ಇದೇ ಮಾರ್ಚ್ 25 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.</p>.<p>ಈ ಹಿನ್ನೆಲೆಯಲ್ಲಿ ಇಂದು ಸಂಜೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಆರ್ಆರ್ಆರ್ ಬಿಡುಗಡೆ ಪೂರ್ವ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ದೇವನಹಳ್ಳಿ ಬಳಿ ಖಾಸಗಿ ರೆಸಾರ್ಟ್ ಒಂದರಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಿತ್ರತಂಡ,ಆರ್ಆರ್ಆರ್ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿತು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ರಾಜಮೌಳಿ ಅವರು ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ಚನ್ನಮ್ಮ ಅವರನ್ನು ಸ್ಮರಿಸಿಕೊಂಡರು.</p>.<p>‘ನಾನು ಹುಟ್ಟಿದ್ದು ಕರ್ನಾಟಕದಲ್ಲಿ, ಬೆಳೆದಿದ್ದು ಆಂಧ್ರಪ್ರದೇಶದಲ್ಲಿ, ವೃತ್ತಿ ಜೀವನ ಪ್ರಾರಂಭಿಸಿದ್ದು ತಮಿಳುನಾಡಿನಿಂದ. ಇವಾಗ ಇರುವುದು ತೆಲಂಗಾಣದಲ್ಲಿ. ಪ್ರತಿಯೊಂದು ಊರಿಗೆ ಅದರದ್ದೇಯಾದ ಮಹತ್ವವಿದೆ. ನಾನು ಎಲ್ಲವನ್ನೂ ಪ್ರೀತಿಸುತ್ತೇನೆ. ಆದರೆ, ಒಂದಕ್ಕೆ ಅಂಟಿಕೊಂಡಿರಲು ಇಷ್ಟಪಡುವುದಿಲ್ಲ’ ಎಂದರು.</p>.<p>‘ಆರ್ಆರ್ಆರ್ ಸಿನಿಮಾದಲ್ಲಿ ರಾಣಿ ಚನ್ನಮ್ಮಳ ಪ್ರಸ್ತಾಪವಿದೆ. ಚನ್ನಮ್ಮಳ ಬಗ್ಗೆ ನಾನು ನನ್ನ ಬಾಲ್ಯಜೀವನದಲ್ಲಿ ಓದಿ ತಿಳಿದುಕೊಂಡಿದ್ದೆ. ಅವರು ನಮಗೆ ಅದ್ಭುತ ಸ್ಪೂರ್ತಿ’ ಎಂದರು.</p>.<p>ಆರ್ಆರ್ಆರ್ ಸಿನಿಮಾದ ಮತ್ತೊಂದು ಟ್ರೈಲರ್ ಬಿಡುಗಡೆಯಾಗುವುದಿಲ್ಲ. ನೇರವಾಗಿ ಸಿನಿಮಾ ಬಿಡುಗಡೆ ಮಾಡುತ್ತೇವೆ. ಇನ್ಮುಂದೆ ಅಭಿಮಾನಿಗಳನ್ನು ಹೆಚ್ಚು ಕಾಯಿಸುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿನಟ ಜೂನಿಯರ್ ಎನ್ಟಿಆರ್, ರಾಮ್ಚರಣ್, ವೆಂಕಟರಾಜು ಇದ್ದರು.</p>.<p><a href="https://www.prajavani.net/entertainment/cinema/rrr-movie-team-press-meet-live-in-bengaluru-920750.html" itemprop="url">Prajavani Facebook Live: ಆರ್.ಆರ್.ಆರ್ ಚಿತ್ರತಂಡದ ಸುದ್ದಿಗೋಷ್ಠಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>