<p>ಈ ಹಿಂದೆ ‘ಆರ’ ಎಂಬ ಸಿನಿಮಾ ಮಾಡಿದ್ದ ರೋಹಿತ್ ಈಗ ‘ಸಹ್ಯಾದ್ರಿ’ ತಪ್ಪಲಿನತ್ತ ಹೊರಟಿದ್ದಾರೆ. ಮಲೆನಾಡು ಭಾಗದ ಹೋರಾಟಗಾರನ ಕಥೆಯನ್ನು ಹೊಂದಿರುವ ಈ ಚಿತ್ರವನ್ನು ಅವರೇ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.</p>.<p>‘ಹದಿಮೂರು ಭಾಷೆಗಳಲ್ಲಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಕನ್ನಡದಲ್ಲಿ ಚಿತ್ರೀಕರಣಗೊಂಡು ಉಳಿದ ಭಾಷೆಗಳಿಗೆ ಡಬ್ ಆಗಲಿದೆ. ಚೆನ್ನೈನಿಂದ ನಾಯಕಿ ಬರುತ್ತಾರೆ. ಸಹ್ಯಾದ್ರಿ ತಪ್ಪಲಿನ ಹೋರಾಟಗಾರನೊಬ್ಬನ ಕಥೆ. ಆತನನ್ನು ಹೊಡೆಯಲು ಯಾರಿದಂಲೂ ಸಾಧ್ಯವಾಗುತ್ತಿರುವುದಿಲ್ಲ. ಅವನು ಸಮಾಜಕ್ಕೆ ಏನು ಮಾಡುತ್ತಾನೆ ಎಂಬುದೇ ಕಥೆ’ ಎಂದರು ರೋಹಿತ್.</p>.<p>‘ಒಂದು ಹಂತದ ಚಿತ್ರೀಕರಣ ಮುಗಿದಿದೆ. ಇನ್ನೊಂದೆರಡು ತಿಂಗಳಲ್ಲಿ ಮುಂದಿನ ಭಾಗದ ಚಿತ್ರೀಕರಣ ಪ್ರಾರಂಭವಾಗಲಿದೆ. ಮುಂದಿನ ವರ್ಷ ಬಿಡುಗಡೆ ಆಲೋಚನೆಯಿದೆ. ಬೈಂದೂರು, ಶಿವಮೊಗ್ಗ, ಮೂಡಿಗೆರೆ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ಯೋಜನೆಯಿದೆ’ ಎಂದರು ಅವರು. </p>.<p>ಗ್ಯಾಂಗ್ಸ್ಟರ್ ಕಥೆ ಹೊಂದಿರುವ ಚಿತ್ರಕ್ಕೆ ನವರತ್ ವಾಸುದೇವ ಸಂಗೀತ, ವಿನೋದ್ ಲೋಕಣ್ಣನವರ್ ಛಾಯಾಚಿತ್ರಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ಹಿಂದೆ ‘ಆರ’ ಎಂಬ ಸಿನಿಮಾ ಮಾಡಿದ್ದ ರೋಹಿತ್ ಈಗ ‘ಸಹ್ಯಾದ್ರಿ’ ತಪ್ಪಲಿನತ್ತ ಹೊರಟಿದ್ದಾರೆ. ಮಲೆನಾಡು ಭಾಗದ ಹೋರಾಟಗಾರನ ಕಥೆಯನ್ನು ಹೊಂದಿರುವ ಈ ಚಿತ್ರವನ್ನು ಅವರೇ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ.</p>.<p>‘ಹದಿಮೂರು ಭಾಷೆಗಳಲ್ಲಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಕನ್ನಡದಲ್ಲಿ ಚಿತ್ರೀಕರಣಗೊಂಡು ಉಳಿದ ಭಾಷೆಗಳಿಗೆ ಡಬ್ ಆಗಲಿದೆ. ಚೆನ್ನೈನಿಂದ ನಾಯಕಿ ಬರುತ್ತಾರೆ. ಸಹ್ಯಾದ್ರಿ ತಪ್ಪಲಿನ ಹೋರಾಟಗಾರನೊಬ್ಬನ ಕಥೆ. ಆತನನ್ನು ಹೊಡೆಯಲು ಯಾರಿದಂಲೂ ಸಾಧ್ಯವಾಗುತ್ತಿರುವುದಿಲ್ಲ. ಅವನು ಸಮಾಜಕ್ಕೆ ಏನು ಮಾಡುತ್ತಾನೆ ಎಂಬುದೇ ಕಥೆ’ ಎಂದರು ರೋಹಿತ್.</p>.<p>‘ಒಂದು ಹಂತದ ಚಿತ್ರೀಕರಣ ಮುಗಿದಿದೆ. ಇನ್ನೊಂದೆರಡು ತಿಂಗಳಲ್ಲಿ ಮುಂದಿನ ಭಾಗದ ಚಿತ್ರೀಕರಣ ಪ್ರಾರಂಭವಾಗಲಿದೆ. ಮುಂದಿನ ವರ್ಷ ಬಿಡುಗಡೆ ಆಲೋಚನೆಯಿದೆ. ಬೈಂದೂರು, ಶಿವಮೊಗ್ಗ, ಮೂಡಿಗೆರೆ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ಯೋಜನೆಯಿದೆ’ ಎಂದರು ಅವರು. </p>.<p>ಗ್ಯಾಂಗ್ಸ್ಟರ್ ಕಥೆ ಹೊಂದಿರುವ ಚಿತ್ರಕ್ಕೆ ನವರತ್ ವಾಸುದೇವ ಸಂಗೀತ, ವಿನೋದ್ ಲೋಕಣ್ಣನವರ್ ಛಾಯಾಚಿತ್ರಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>