ಸಮಾರಂಭದಲ್ಲಿ ನಾಯಕ ಭಾನು ಪ್ರಕಾಶ್ ಅವರು ಅಗಲಿದ ತಮ್ಮ ಅಣ್ಣನನ್ನು ನೆನೆದು ಭಾವುಕರಾದರು. ‘ನನ್ನ ಅಣ್ಣ ಕೂಡ ಒಂದು ಸಿನಿಮಾ ಮಾಡಿದ್ದ. ಚಿತ್ರ ತೆರೆಗೆ ಬರುವ ಮುಂಚೆಯೇ ಅವನು ನಮ್ಮನ್ನು ಬಿಟ್ಟು ಹೋದ. ಈ ಸಂಕಟ ನಮ್ಮ ಕುಟುಂಬನ್ನು ಇಂದಿಗೂ ಕಾಡುತ್ತಿದೆ ಎಂದರು. ಅಣ್ಣನ ನಿಧನದ ನಂತರ ಊರಿನ ಕೆಲವರು ನಮ್ಮನ್ನು ನೋಡುತ್ತಿದ್ದ ದೃಷ್ಟಿಯೇ ಬೇರೆ ಆಯಿತು. ನಮ್ಮನ್ನು ನೋಡಿ ನಗುವವರ ಮುಂದೆ ಎದ್ದು ನಿಲ್ಲಬೇಕು ಎಂದು ನಾನು ಈ ಸಿನಿಮಾದಲ್ಲಿ ನಟಿಸಿದ್ದೇನೆ. ನನ್ನ ಅಣ್ಣನ ಹಲವು ಸ್ನೇಹಿತರಾದ ಅಶೋಕ್, ಅಬ್ದುಲ್ ರೋಫ್ ಸಿದ್ವಿಕ್, ನಿಂಗಪ್ಪ, ಇರ್ಫಾನ್, ಮಲ್ಲೇಶ್ ಮುಂತಾದವರು ನನ್ನ ಜೊತೆ ನಿಂತು ಚಿತ್ರವನ್ನು ಬಿಡುಗಡೆ ಹಂತದವರೆಗೂ ತಂದಿದ್ದಾರೆ’ ಎಂದರು ಭಾನುಪ್ರಕಾಶ್.