<p><strong>ಮುಂಬೈ</strong>: ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣದ ತನಿಖೆಯ ಭಾಗವಾಗಿ ವಿವಿಧ ಸ್ಥಳಗಳಿಂದ ಆರೋಪಿಯ ಬೆರಳಚ್ಚುಗಳನ್ನು ಸಂಗ್ರಹಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಜನವರಿ 16ರಂದು ಬಾಂದ್ರಾದಲ್ಲಿರುವ ಸದ್ಗುರು ಶರಣ್ ಅಪಾರ್ಟ್ಮೆಂಟ್ನಲ್ಲಿರುವ ಸೈಫ್ ಅಲಿ ಖಾನ್ ನಿವಾಸದೊಳಗೆ ನುಗ್ಗಿದ್ದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್, ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ಭಾನುವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.</p><p>‘ಸ್ಥಳೀಯ ಪೊಲೀಸರು ಮತ್ತು ಅಪರಾಧ ವಿಭಾಗವು ಸದ್ಗುರು ಶರಣ್ ಅಪಾರ್ಟ್ಮೆಂಟ್ಗೆ ತೆರಳಿ ಬೆರಳಚ್ಚುಗಳನ್ನು ಸಂಗ್ರಹಿಸಿದೆ. ವಿಧಿವಿಜ್ಞಾನ ತಂಡವೂ ಅಲ್ಲಿಗೆ ಭೇಟಿ ನೀಡಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಸ್ನಾನಗೃಹದ ಕಿಟಕಿ, ಡಕ್ಟ್ ಶಾಫ್ಟ್ ಸೇರಿದಂತೆ ಆರೋಪಿಯ ಬೆರಳಚ್ಚುಗಳು ಅಪರಾಧ ನಡೆದ ಸ್ಥಳದಲ್ಲಿ ಪತ್ತೆಯಾಗಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಬಾಂಗ್ಲಾದೇಶದ ಜಲೋಕಾತಿ ಜಿಲ್ಲೆಯವನಾದ ಶೆಹಜಾದ್, ಐದು ತಿಂಗಳಿನಿಂದ ಮುಂಬೈನಲ್ಲಿ ನೆಲೆಸಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣದ ತನಿಖೆಯ ಭಾಗವಾಗಿ ವಿವಿಧ ಸ್ಥಳಗಳಿಂದ ಆರೋಪಿಯ ಬೆರಳಚ್ಚುಗಳನ್ನು ಸಂಗ್ರಹಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಜನವರಿ 16ರಂದು ಬಾಂದ್ರಾದಲ್ಲಿರುವ ಸದ್ಗುರು ಶರಣ್ ಅಪಾರ್ಟ್ಮೆಂಟ್ನಲ್ಲಿರುವ ಸೈಫ್ ಅಲಿ ಖಾನ್ ನಿವಾಸದೊಳಗೆ ನುಗ್ಗಿದ್ದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್, ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ಭಾನುವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.</p><p>‘ಸ್ಥಳೀಯ ಪೊಲೀಸರು ಮತ್ತು ಅಪರಾಧ ವಿಭಾಗವು ಸದ್ಗುರು ಶರಣ್ ಅಪಾರ್ಟ್ಮೆಂಟ್ಗೆ ತೆರಳಿ ಬೆರಳಚ್ಚುಗಳನ್ನು ಸಂಗ್ರಹಿಸಿದೆ. ವಿಧಿವಿಜ್ಞಾನ ತಂಡವೂ ಅಲ್ಲಿಗೆ ಭೇಟಿ ನೀಡಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಸ್ನಾನಗೃಹದ ಕಿಟಕಿ, ಡಕ್ಟ್ ಶಾಫ್ಟ್ ಸೇರಿದಂತೆ ಆರೋಪಿಯ ಬೆರಳಚ್ಚುಗಳು ಅಪರಾಧ ನಡೆದ ಸ್ಥಳದಲ್ಲಿ ಪತ್ತೆಯಾಗಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p><p>ಬಾಂಗ್ಲಾದೇಶದ ಜಲೋಕಾತಿ ಜಿಲ್ಲೆಯವನಾದ ಶೆಹಜಾದ್, ಐದು ತಿಂಗಳಿನಿಂದ ಮುಂಬೈನಲ್ಲಿ ನೆಲೆಸಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>