<p><strong>ಮುಂಬೈ:</strong> ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಸಂದರ್ಭದಲ್ಲಿ ತಮ್ಮನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ಆಟೊ ಚಾಲಕ ಭಜನ್ ಸಿಂಗ್ ರಾಣಾ ಅವರನ್ನು ಬಾಲಿವುಡ್ ನಟ ಸೈಫ್ ಅಲಿ ಖಾನ್ ಭೇಟಿಯಾಗಿದ್ದಾರೆ. </p><p>ನಟ ಸೈಫ್ ಅಲಿ ಖಾನ್ ಅವರು ಐದು ದಿನಗಳ ಚಿಕಿತ್ಸೆ ಬಳಿಕ ಮಂಗಳವಾರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಭಜನ್ ಸಿಂಗ್ ರಾಣಾ ಅವರನ್ನು ಆಸ್ಪತ್ರೆಗೆ ಕರೆಸಿಕೊಂಡಿದ್ದ ಸೈಫ್, ಕೆಲಕಾಲ ಮಾತುಕತೆ ನಡೆಸಿದ್ದಾರೆ.</p><p>ಗಾಯಗೊಂಡಿದ್ದ ವೇಳೆ ತಮ್ಮನ್ನು ಕೆಲವೇ ನಿಮಿಷಗಳಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಕ್ಕೆ ಭಜನ್ ಸಿಂಗ್ ರಾಣಾ ಅವರಿಗೆ ಸೈಫ್ ಧನ್ಯವಾದ ಸಲ್ಲಿಸಿದ್ದಾರೆ. ಜತೆಗೆ, ಅವರೊಂದಿಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ರಾಣಾ ಜತೆ ಸೈಫ್ ಸಂತಸ ಹಂಚಿಕೊಳ್ಳುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. </p><p>ಸೈಫ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಕ್ಕಾಗಿ ಭಜನ್ ಸಿಂಗ್ ರಾಣಾ ಅವರಿಗೆ ಸಂಸ್ಥೆಯೊಂದು ₹11,000 ಬಹುಮಾನ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಜತೆಗೆ, ಸೈಫ್ ಅವರ ಕಡೆಯಿಂದಲ್ಲೂ ರಾಣಾಗೆ ಸೂಕ್ತ ಬಹುಮಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ. </p><p>ಜ. 16ರಂದು ಅವರ ಮನೆಯಲ್ಲಿಯೇ ನಟನಿಗೆ, ದುಷ್ಕರ್ಮಿಯೊಬ್ಬ ಆರು ಬಾರಿ ಚೂರಿಯಿಂದ ಇರಿದಿದ್ದ. ಗಂಭೀರ ಸ್ವರೂಪದ ಗಾಯಗಳೊಂದಿಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.</p><p>ಖಾನ್ ಅವರಿಗೆ ಕೈಗೆ 2 ಕಡೆ, ಕತ್ತಿನ ಬಲಭಾಗ ಮತ್ತು ಬೆನ್ನಿನಲ್ಲಿ ಗಾಯ ಆಗಿತ್ತು. ಶಸ್ತ್ರಚಿಕಿತ್ಸೆ ನಡೆಸಿ, ಬೆನ್ನುಮೂಳೆ ಬಳಿ ಸಿಲುಕಿದ್ದ ಚಾಕುವಿನ ಮುರಿದ ಭಾಗವನ್ನು ವೈದ್ಯರು ತೆಗೆದಿದ್ದರು. ತುಸು ಚೇತರಿಕೆ ಬಳಿಕ ತೀವ್ರ ನಿಗಾ ಘಟಕದಿಂದ ವಿಶೇಷ ವಾರ್ಡ್ಗೆ ಜ. 17ರಂದು ಸ್ಥಳಾಂತರಿಸಲಾಗಿತ್ತು.</p><p>ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿದಿದ್ದ ಆರೋಪಿ, ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.</p>.ನಟ ಸೈಫ್ ಕುಟುಂಬದ ₹15,000 ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?.ಸೈಫ್ ಚಾಕು ಇರಿತ ಪ್ರಕರಣ | ಆರೋಪಿ ಬಾಂಗ್ಲಾದೇಶದವನು: ಮುಂಬೈ ಪೊಲೀಸ್.ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ.ನಟ ಸೈಫ್ ಅಲಿ ಖಾನ್ಮೇಲಿನ ದಾಳಿಯಲ್ಲಿ ಭೂಗತ ಗ್ಯಾಂಗ್ ನಂಟಿಲ್ಲ: ಗೃಹ ಸಚಿವ.ಸೈಫ್ ಮೇಲಿನ ದಾಳಿ | ಮುಂಬೈ ಸುರಕ್ಷಿತವಲ್ಲ ಎನ್ನುವುದು ಸರಿಯಲ್ಲ: ಫಡಣವೀಸ್.ಸೈಫ್ ಚಾಕು ಇರಿತ ಪ್ರಕರಣ: ಪುತ್ರ ಜೇ ಕೋಣೆಗೆ ನುಗ್ಗಿದ ಆಗಂತುಕ; ₹1ಕೋಟಿ ಬೇಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಸಂದರ್ಭದಲ್ಲಿ ತಮ್ಮನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ಆಟೊ ಚಾಲಕ ಭಜನ್ ಸಿಂಗ್ ರಾಣಾ ಅವರನ್ನು ಬಾಲಿವುಡ್ ನಟ ಸೈಫ್ ಅಲಿ ಖಾನ್ ಭೇಟಿಯಾಗಿದ್ದಾರೆ. </p><p>ನಟ ಸೈಫ್ ಅಲಿ ಖಾನ್ ಅವರು ಐದು ದಿನಗಳ ಚಿಕಿತ್ಸೆ ಬಳಿಕ ಮಂಗಳವಾರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಭಜನ್ ಸಿಂಗ್ ರಾಣಾ ಅವರನ್ನು ಆಸ್ಪತ್ರೆಗೆ ಕರೆಸಿಕೊಂಡಿದ್ದ ಸೈಫ್, ಕೆಲಕಾಲ ಮಾತುಕತೆ ನಡೆಸಿದ್ದಾರೆ.</p><p>ಗಾಯಗೊಂಡಿದ್ದ ವೇಳೆ ತಮ್ಮನ್ನು ಕೆಲವೇ ನಿಮಿಷಗಳಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಕ್ಕೆ ಭಜನ್ ಸಿಂಗ್ ರಾಣಾ ಅವರಿಗೆ ಸೈಫ್ ಧನ್ಯವಾದ ಸಲ್ಲಿಸಿದ್ದಾರೆ. ಜತೆಗೆ, ಅವರೊಂದಿಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ರಾಣಾ ಜತೆ ಸೈಫ್ ಸಂತಸ ಹಂಚಿಕೊಳ್ಳುತ್ತಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. </p><p>ಸೈಫ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಕ್ಕಾಗಿ ಭಜನ್ ಸಿಂಗ್ ರಾಣಾ ಅವರಿಗೆ ಸಂಸ್ಥೆಯೊಂದು ₹11,000 ಬಹುಮಾನ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಜತೆಗೆ, ಸೈಫ್ ಅವರ ಕಡೆಯಿಂದಲ್ಲೂ ರಾಣಾಗೆ ಸೂಕ್ತ ಬಹುಮಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ. </p><p>ಜ. 16ರಂದು ಅವರ ಮನೆಯಲ್ಲಿಯೇ ನಟನಿಗೆ, ದುಷ್ಕರ್ಮಿಯೊಬ್ಬ ಆರು ಬಾರಿ ಚೂರಿಯಿಂದ ಇರಿದಿದ್ದ. ಗಂಭೀರ ಸ್ವರೂಪದ ಗಾಯಗಳೊಂದಿಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.</p><p>ಖಾನ್ ಅವರಿಗೆ ಕೈಗೆ 2 ಕಡೆ, ಕತ್ತಿನ ಬಲಭಾಗ ಮತ್ತು ಬೆನ್ನಿನಲ್ಲಿ ಗಾಯ ಆಗಿತ್ತು. ಶಸ್ತ್ರಚಿಕಿತ್ಸೆ ನಡೆಸಿ, ಬೆನ್ನುಮೂಳೆ ಬಳಿ ಸಿಲುಕಿದ್ದ ಚಾಕುವಿನ ಮುರಿದ ಭಾಗವನ್ನು ವೈದ್ಯರು ತೆಗೆದಿದ್ದರು. ತುಸು ಚೇತರಿಕೆ ಬಳಿಕ ತೀವ್ರ ನಿಗಾ ಘಟಕದಿಂದ ವಿಶೇಷ ವಾರ್ಡ್ಗೆ ಜ. 17ರಂದು ಸ್ಥಳಾಂತರಿಸಲಾಗಿತ್ತು.</p><p>ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿದಿದ್ದ ಆರೋಪಿ, ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.</p>.ನಟ ಸೈಫ್ ಕುಟುಂಬದ ₹15,000 ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?.ಸೈಫ್ ಚಾಕು ಇರಿತ ಪ್ರಕರಣ | ಆರೋಪಿ ಬಾಂಗ್ಲಾದೇಶದವನು: ಮುಂಬೈ ಪೊಲೀಸ್.ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ.ನಟ ಸೈಫ್ ಅಲಿ ಖಾನ್ಮೇಲಿನ ದಾಳಿಯಲ್ಲಿ ಭೂಗತ ಗ್ಯಾಂಗ್ ನಂಟಿಲ್ಲ: ಗೃಹ ಸಚಿವ.ಸೈಫ್ ಮೇಲಿನ ದಾಳಿ | ಮುಂಬೈ ಸುರಕ್ಷಿತವಲ್ಲ ಎನ್ನುವುದು ಸರಿಯಲ್ಲ: ಫಡಣವೀಸ್.ಸೈಫ್ ಚಾಕು ಇರಿತ ಪ್ರಕರಣ: ಪುತ್ರ ಜೇ ಕೋಣೆಗೆ ನುಗ್ಗಿದ ಆಗಂತುಕ; ₹1ಕೋಟಿ ಬೇಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>